Wednesday 24th, April 2024
canara news

ಬಿಸಿಲ ಹೊಡೆತಕ್ಕೆ ಪ್ರಚಾರದ ಸಮಯವನ್ನೇ ಬದಲಿಸಿಕೊಂಡ ಕರಾವಳಿಗರು

Published On : 03 May 2018   |  Reported By : canaranews network


ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ 11 ದಿನಗಳು ಮಾತ್ರ ಬಾಕಿಯಿದೆ. ಅದರಲ್ಲೂ ರಾಜಕೀಯ ಪಕ್ಷಗಳಿಗೆ ತಮ್ಮ ಪರ ಪ್ರಚಾರ ನಡೆಸಲು ಬೆರಳೆಣಿಕೆಯ ದಿನಗಳು ಮಾತ್ರವಿದೆ. ಆದರೆ ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಪಕ್ಷಗಳಿಗೆ ಮನೆ ಮನೆಗಳಿಗೆ ಭೇಟಿ ನೀಡಿ ಮತಯಾಚಿಸಲು ಬಿಸಿಲು ಅಡ್ಡಿಯಾಗಿದೆ.

ಹೌದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಅತೀ ಹೆಚ್ಚು ಉಷ್ಣಾಂಶ ದಾಖಲಾಗುತ್ತಿರುವ ಕಾರಣಕ್ಕಾಗಿ ಎಲ್ಲಾ ಪಕ್ಷದ ಕಾರ್ಯಕರ್ತರು ಬಿಸಿಲಿನ ಝಳ ತಪ್ಪಿಸುವ ನಿಟ್ಟಿನಲ್ಲಿ ತಮ್ಮ ಪ್ರಚಾರದ ಸಮಯವನ್ನೇ ಬದಲಾವಣೆ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿದ್ದಾರೆ.

ರಾಜ್ಯದ ವಿಧಾನಸಭಾ ಚುನಾವಣೆ ಮೇ 12 ರಂದು ನಡೆಯಲಿದ್ದು, ಫಲಿತಾಂಶ ಮೇ 15 ಕ್ಕೆ ಪ್ರಕಟಗೊಳ್ಳಲಿದೆ. ಮೇ 15 ಪ್ರಕಟಗೊಳ್ಳುವ ಫಲಿತಾಂಶ ತನ್ನ ಪರ ಹಾಗೂ ತನ್ನ ಪಕ್ಷದ ಪರವಿರಲಿ ಎನ್ನುವ ಕಾರಣಕ್ಕಾಗಿ ಎಲ್ಲಾ ಪಕ್ಷಗಳೂ ತಮ್ಮ ಮತಬೇಟೆಯನ್ನು ಈಗಾಗಲೇ ಆರಂಭಿಸಿದೆ.ಅಭ್ಯರ್ಥಿಗಳು ಬಹಿರಂಗ ಸಭೆಗಳಿಗಿಂತ ಮನೆ ಮನೆಗೆ ಭೇಟಿ ಕಾರ್ಯಕ್ರಮವನ್ನು ಹೆಚ್ಚಾಗಿ ನಡೆಸುವುದರಿಂದ ಕರಾವಳಿಯ ಬಿಸಿಲು ಅಭ್ಯರ್ಥಿಗಳ ಉತ್ಸಾಹಕ್ಕೆ ತಣ್ಣಿರೇರೆಚಿದೆ. ಜಿಲ್ಲೆಯಲ್ಲಿ ಪ್ರತಿದಿನ 35 ಡಿಗ್ರಿ ಸೆಲ್ಸಿಯಸ್ ಗಿಂತ ಜಾಸ್ತಿ ಉಷ್ಣಂಶ ದಾಖಲಾಗುತ್ತಿದೆ.

ಈ ಕಾರಣಕ್ಕಾಗಿ ಬಿಸಿಲಿಗೆ ಮನೆ ಮನೆಗೆ ಭೇಟಿ ನೀಡುವುದು ಕಾರ್ಯಕರ್ತರಿಗೆ ಕಷ್ಟ ಸಾಧ್ಯವಾಗಿದೆ.ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಪ್ರಚಾರ ಸಮಯದಲ್ಲಿ ಬದಲಾವಣೆಯನ್ನೂ ಮಾಡಿಕೊಳ್ಳಲಾಗಿದೆ. ಮುಂಜಾನೆಯಿಂದ ಆರಂಭಗೊಂಡ ಪ್ರಚಾರ ಮಧ್ಯಾಹ್ನದ ಒಳಗೆ ನಿಲ್ಲಿಸಲಾಗುತ್ತದೆ. ಬಳಿಕ ಮಧ್ಯಾಹ್ನ 3 ಗಂಟೆಯ ಬಳಿಕ ಮಧ್ಯರಾತ್ರಿವರೆಗೂ ಪ್ರಚಾರ ಕಾರ್ಯದಲ್ಲಿ ತೊಡಗುತ್ತಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here