Friday 19th, April 2024
canara news

ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ವತಿಯಿಂದ ಶ್ರೀ ನರಸಿಂಹ ಜಯಂತಿ ಆಚರಣೆ

Published On : 03 May 2018   |  Reported By : Rons Bantwal


ಮುಂಬಯಿ, ಮೇ. 03: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ, ಸಾಯನ್, ಶ್ರೀ ನರಸಿಂಹ ಜಯಂತಿಯನ್ನು, ವೈಶಾಖ ಶುದ್ಧ ಚತುರ್ದಶಿ ಪುಣ್ಯದಿನವಾದ ಶನಿವಾರ ದಿನಾಂಕ 28.4.2018 ರಂದು ಬಿ.ಎಸ್. ಕೆ. ಬಿ. ಎಸೋಸಿಯೇಶನ್ ನ ಸಹಯೋಗದೊಂದಿಗೆ ಆಶ್ರಯದಲ್ಲಿ ಆಚರಿಸಿತು.

ವೇದಿಕೆಯಲ್ಲಿ ಅಲಂಕೃತ ಮಂಟಪದಲ್ಲಿ ಶ್ರೀ ನರಸಿಂಹ ಪ್ರತಿಷ್ಠೆ, ಕಲ್ಪೋಕ್ತ ಪೂಜೆ, ವಿಷ್ಣು ಸಹಸ್ರ ನಾಮಾರ್ಚನೆ ಮುಂತಾದ ಧಾರ್ಮಿಕ ವಿಧಿಗಳನ್ನು, ಬಾಲಾಲಯ ಅರ್ಚಕರಾದ ಶ್ರೀ ಕೃಷ್ಣಪ್ರಸಾದ್ ಕೆದಿಲಾಯರವರು ವಿದ್ಯುಕ್ತವಾಗಿ ನಡೆಸಿಕೊಟ್ಟರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಗೋಕುಲ ಭಜನಾ ಮಂಡಳಿಯಿಂದ ಶ್ರೀ ನರಸಿಂಹ ಸ್ತೋತ್ರ ಪಠನೆ ಹಾಗೂ ಭಜನಾ ಕಾರ್ಯಕ್ರಮ ನೆರವೇರಿತು. ಶ್ರೀ ದೇವರಿಗೆ ಮಹಾ ಮಂಗಳಾರತಿಯಾದ ನಂತರ ತೀರ್ಥ ಪ್ರಸಾದ ವಿತರಣೆ ಹಾಗೂ ಉಪಹಾರದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಸಂಘದ ಉಪಾಧ್ಯಕ್ಷರು ವಾಮನ್ ಹೊಳ್ಳ, ಗೌ| ಕಾರ್ಯದರ್ಶಿ ಎ ಪಿ.ಕೆ. ಪೆÇೀತಿ, ಕೋಶಾಧಿಕಾರಿ ಹರಿದಾಸ್ ಭಟ್ ಮತ್ತಿತರು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ನೂರಾರು ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು,




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here