Friday 26th, April 2024
canara news

ಮೇ. ೮ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಬಿಜೆಪಿ ಚಾಣಕ್ಯ ಅಮಿತ್ ಶಾ

Published On : 07 May 2018   |  Reported By : canaranews network


ಮಂಗಳೂರು: ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಮತ್ತೊಮ್ಮೆ ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದು, ಜಿಲ್ಲೆಯಲ್ಲಿ ಮತಬೇಟೆಗೆ ಮುಂದಾಗಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿರುವ ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಚುನಾವಣೆಗೆ ಕೆಲವೇ ದಿನಗಳು ಇರುವ ಹಿನ್ನೆಲೆ ಮೇ 08ರಂದು ಮಂಗಳೂರಿಗೆ ಆಗಮಿಸಿ ಬಿಜೆಪಿ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ.ಮಂಗಳೂರು, ಮಂಗಳೂರು ನಗರ ದಕ್ಷಿಣ, ಮಂಗಳೂರು ನಗರ ಉತ್ತರ ಕ್ಷೇತ್ರಗಳಲ್ಲಿ ಮೇ 8 ರಂದು ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ.

ಮೇ 8 ರಂದು ಮಡಿಕೇರಿಯಿಂದ ವಿಮಾನ ಮೂಲಕ ಆಗಮಿಸುವ ಅಮಿತ್ ಶಾ, ಮದ್ಯಾಹ್ನ 2.30 ಕ್ಕೆ ಮಂಗಳೂರು ಕ್ಷೇತ್ರದ ಕಾಪಿಕಾಡ್ ಬಿಜೆಪಿ ಕಚೇರಿಯಿಂದ ತೊಕ್ಕೊಟ್ಟು ಜಂಕ್ಷನ್ ವರೆಗೆ, ಸಂಜೆ 3.45ರಿಂದ 5.45 ರವರೆಗೆ ನಗರದ ನವಭಾರತ ವೃತ್ತದಿಂದ ಪಿ.ಎಂ ರಾವ್ ರೋಡ್ ಮೂಲಕ ಟೆಂಪಲ್ ಸ್ಕ್ವಾರ್ ವರೆಗೆ, ನಂತರ ಸಂಜೆ 4.45ಕ್ಕೆ ಕಾವೂರಿನಿಂದ ಮರಕಡವರೆಗೆ ಮಂಗಳೂರು ನಗರ ಉತ್ತರ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here