ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಜಿಲ್ಲೆಯಲ್ಲಿ ದಿನ ಕಳೆದಂತೆ ಚುನಾವಣಾ ರಾಜಕೀಯ ವಿಭಿನ್ನ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅತ್ಯಂತ ಕುತೂಹಲ ಹಾಗೂ ಜಿದ್ದಾಜಿದ್ದಿನಿಂದ ಕೂಡಿದ ಕ್ಷೇತ್ರವಾಗಿದ್ದು, ಇಲ್ಲಿ ಆರಂಭವಾಗಿರುವ ಪೋಸ್ಟರ್ ವಾರ್ ಈಗ ತಾರಕಕ್ಕೇರಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇರ ಜಿದ್ದಾಜಿದ್ದಿನ ಸ್ಪರ್ಧೆ ಇರುವುದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ .
ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಾಲಿಗೆ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಇದೆ. ಇಲ್ಲಿ ಚುನಾವಣೆ ಧರ್ಮ ರಾಜಕಾರಣದ ಮೇಲೆ ಅವಲಂಬಿತವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆ ಬಂಟ್ವಾಳ ಕ್ಷೇತ್ರದಲ್ಲಿ ನಡೆಯುತ್ತಿರುವ ಪೋಸ್ಟರ್ ರಾಜಕೀಯ . ಇತ್ತೀಚೆಗೆ ಕಾಂಗ್ರೆಸ್ ವಿರುದ್ಧ ಮನೆ ಬಾಗಿಲಿಗೆ ಪೋಸ್ಟರ್ ಅಂಟಿಸುವ ಅಭಿಯಾನ ಭಾರೀ ಸುದ್ದಿಯಾಗಿತ್ತು. ಆದರೆ ಈಗ ಬಿಜೆಪಿ ವಿರುದ್ಧ ಪೋಸ್ಟರ್ ವಾರ್ ಆರಂಭವಾಗಿದೆ.