ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 12 ರಂದು ಮತದಾನ ಸುಸೂತ್ರವಾಗಿ ನಡೆಯಲು ಬೇಕಾದ ಅಗತ್ಯ ಭಧ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರವಿಕಾಂತೇ ಗೌಡ ತಿಳಿಸಿದ್ದಾರೆ .
ಜಿಲ್ಲೆಯಲ್ಲಿ ಮತದಾರರು ನಿರ್ಭೀತಿಯಿಂದ ಮತ ಚಲಾವಣೆ ಮಾಡಿ ಎಂದು ಡಾ. ರವಿಕಾಂತೇ ಗೌಡ ಕರೆನೀಡಿದ್ದು, ಚುನಾವಣೆಗೆ ಇನ್ನು ಎರಡೇ ದಿನಗಳು ಬಾಕಿಯಿರುವ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆ ಜಿಲ್ಲೆಯ ಅತ್ಯಂತ ಸೂಕ್ಷ್ಮ ಮತಗಟ್ಟೆಗಳ ಮೇಲೆ ಕಣ್ಣಿರಿಸಿದ್ದು ಭದ್ರತೆಗೆ ಎಲ್ಲಾ ಕ್ರಮಗಳನ್ನು ಕೈ ಗೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ ಶಾಂತಿ ಮತ್ತು ಸುಸೂತ್ರವಾಗಿ ನಡೆಯಲು ಬೇಕಾದ ಎಲ್ಲಾ ಕ್ರಮಗಳನ್ನು ಇಲಾಖೆ ಕೈಗೊಂಡಿದೆ. ಜಿಲ್ಲೆಯ ಗಡಿ ಭಾಗಗಳಲ್ಲಿ 23 ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಅಲ್ಲಿ ಸಿಸಿಟಿವಿಗಳ ಕಣ್ಗಾವಲು, ಕೇಂದ್ರೀಯ ಭದ್ರತಾ ಪಡೆಗಳ ಯೋಧರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.