Wednesday 14th, May 2025
canara news

ಚುನಾವಣೆ ವಿಜಯೋತ್ಸವಕ್ಕೆ ಪಟಾಕಿ ನಿಷೇಧ

Published On : 13 May 2018   |  Reported By : canaranews network


ಮಂಗಳೂರು: ಈ ಬಾರಿ ಚುನಾಯಿತ ಅಭ್ಯರ್ಥಿಗಳ ಪರವಾಗಿ ಕಾರ್ಯಕರ್ತರು ವಿಜಯೋತ್ಸವಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸುವಂತಿಲ್ಲ.ಹೀಗಂತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಸಸಿಕಾಂತ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ವಿಜಯೋತ್ಸವಕ್ಕೆ ನಿಷೇಧ ಇದ್ದರೂ ಇದುವರೆಗೆ ಪಟಾಕಿ ಸಿಡಿಸುವುದಕ್ಕೆ ನಿಷೇಧ ಇದುವರೆಗೆ ಇರಲಿಲ್ಲ. ಆದರೆ ಈ ಬಾರಿ ಚುನಾವಣಾ ಆಯೋಗ ಇದಕ್ಕೂ ನಿರ್ಬಂಧ ವಿಧಿಸಿದೆ.ಪಟಾಕಿ ಸಿಡಿಸುವುದಕ್ಕೆ ಮಾತ್ರವಲ್ಲದೆ, ಪಟಾಕಿ ಮಾರಾಟ ಮಾಡುವುದಕ್ಕೂ ನಿಷೇಧ ವಿಧಿಸಲಾಗಿದೆ. ಮತ ಎಣಿಕೆ ನಡೆಯುವ ಮೇ 15ರಂದು ಬೆಳಿಗ್ಗೆ 10 ಗಂಟೆಯಿಂದ ಮೇ 17ರ ಸಂಜೆ 5 ಗಂಟೆಯವರೆಗೆ ಯಾರೂ ಕೂಡಾ ಪಟಾಕಿ ಸಿಡಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಖಡಕ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ವಿಜಯೋತ್ಸವದ ದಿನ ಮೆರವಣಿಗೆ, ಪಟಾಕಿಸಿಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here