Wednesday 14th, May 2025
canara news

ಇವಿಎಂನಲ್ಲಿ ಸಂಶಯ – 'ರೈ' ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ 7 ಅಭ್ಯರ್ಥಿಗಳಿಂದ ದೂರು

Published On : 16 May 2018   |  Reported By : canaranews network


ಮಂಗಳೂರು: ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’ ಎಂದು ಆಕ್ಷೇಪ ದಾಖಲಿಸಿದ್ದಾರೆ.

ಮಂಗಳೂರಿನ ಬೋಂದೆಲ್ನಲ್ಲಿರುವ ಮತ ಎಣಿಕೆಯ ಕೇಂದ್ರಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’. ಕಾಂಗ್ರೆಸ್ ಪಕ್ಷವು 8 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ ಫಲಿತಾಂಶ ಸಂಪೂರ್ಣ ಬದಲಾಗಿದೆ ಎಂದು ಆಕ್ಷೇಪ ದಾಖಲಿಸಿದರು.ದ.ಕ.ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷವು 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ನೇತೃತ್ವದಲ್ಲಿ ಪಕ್ಷದ ಇತರ 7 ಅಭ್ಯರ್ಥಿಗಳು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿ ರಿಟರ್ನಿಂಗ್ ಆಫೀಸರ್ ಮುಂದೆ ಆಕ್ಷೇಪ ದಾಖಲಿಸಿದ್ದಾರೆ.ಮಾತ್ರವಲ್ಲ ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here