ಮಂಗಳೂರು:ವಿಧಾನ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಮೂಡಬಿದ್ರೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿಯ ಉಮಾನಾಥ ಕೋಟ್ಯಾನ್ ಗೆಲುವಿನ ನಗೆ ಬೀರಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಉಮಾನಾಥ್ ಕೋಟ್ಯಾನ್ - 48461 ಪಡೆದಿದ್ದು ಈ ಬಾರಿ ಚುನಾವಣೆಯಲ್ಲಿ 22 ಸಾವಿರಕ್ಕೂ ಅಧಿಕ ಮತಗಳಿಂದ ಮೂಡುಬಿದಿರೆಯ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅಭಯಚಂದ್ರ ಜೈನ್ ವಿರುದ್ಧ ಜಯಗಳಿಸಿದ್ದಾರೆ
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ, ಮೂಡಬಿದಿರೆ ಕ್ಷೇತ್ರದ ಸಮಿತಿ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ ಉಮಾನಾಥ ಕೋಟ್ಯಾನ್ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದರು.ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪರವಾಗಿ ಹಲವು ಕಾರ್ಯಕ್ರಮಗಳನ್ನು ಕರಾವಳಿಯಲ್ಲಿ ಆಯೋಜಿಸಿದವರು ಉಮನಾಥ ಕೋಟ್ಯಾನ್. ತುಳು ಭಾಷೆಯನ್ನು ಸಂವಿಧಾನದ ಹದಿನೆಂಟನೇ ಪರಿಚ್ಛೇದಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ದೆಹಲಿ ತನಕ ಮನವಿ ಕೊಂಡು ಹೋಗಿದ್ದರು.