Thursday 28th, March 2024
canara news

ನಿವ್ರತ್ತಿ ಹೊಂದಿದ ಚೆನ್ನಪ್ಪ ಗೌಡ ಮತ್ತು ಡಿ.ಆನಂದ ವಿದಾಯ ಸಮಾರಂಭ

Published On : 06 Jun 2018   |  Reported By : Rons Bantwal


ಬಂಟ್ವಾಳ: ಆಡಳಿತ ಮಂಡಳಿ, ಸಿಬ್ಬಂದಿ, ಸದಸ್ಯರು ಜೊತೆ ಮುಖ್ಯ ಕಾರ್ಯ ನಿರ್ವಾಣಾಧಿಕಾರಿ ವಿಶ್ವಾಸಕ್ಕೆ ಪಡೆದು ಕೊಂಡಿಯಾಗಿ ಕೆಲಸ ಮಾಡಿದಾಗ ಸಹಕಾರಿ ಸಂಘಗಳು ಬೆಳೆಯುತ್ತದೆ ಎನ್ನುವುದಕ್ಕೆ ಬಂಟ್ವಾಳ ಸಹಕಾರಿ ಸಂಘಗಳು ಸಾಕ್ಷಿ ಎಂದು ಡಿ.ಸಿ.ಸಿ.ಬ್ಯಾಂಕ್ ನ ನಿರ್ದೇಶಕ ಟಿ.ರಾಜಾರಾಂ ಭಟ್ ಹೇಳಿದರು.

ಅವರು ಬಿಸಿರೋಡು ಡಿ.ಸಿ.ಸಿ.ಬ್ಯಾಂಕ್ ನಲ್ಲಿ ಬಂಟ್ವಾಳ ತಾಲೂಕಿನ ಪ್ರಾಥಮಿಕ ಕ್ರಷಿಪತ್ತಿನ ಸಹಕಾರಿ ಸಂಘಗಳ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ , ಕೆದಿಲ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವ್ರತ್ತಿ ಹೊಂದಿದ ಚೆನ್ನಪ್ಪ ಗೌಡ ಮತ್ತು ಬಿಸಿರೋಡು ಡಿ.ಸಿ.ಸಿ.ಬ್ಯಾಂಕ್ ನ ಶಾಖಾ ವ್ಯವಸ್ಥಾಪಕರಾಗಿ ನಿವ್ರತ್ತಿ ಹೊಂದಿದ ಆನಂದ ಇವರ ವಿದಾಯ ಸಮಾರಂಭದಲ್ಲಿ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಸಹಕಾರಿ ಕ್ಷೇತ್ರ ಗಳು ಆದರ್ಶದ ಗೆರೆಯಲ್ಲಿ ನಡೆಯುತ್ತಿದೆ. ಇದಕ್ಜೆ ಸಿಬ್ಬಂದಿ ಗಳ ಪಾತ್ರ ಪ್ರಾಮುಖ್ಯ ಪಡೆದಿದೆ ಎಂದರು.

ಕಾರ್ಯವೈಖರಿ ಯ ಶೈಲಿ ಬಹಳ ಪ್ರಾಮುಖ್ಯತೆ ಪಡೆಯುತ್ತದೆ ಎಂದು ದ.ಕ.ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ ಹೇಳಿದರು. ಪ್ರಮಾಣಿಕತೆ, ಆಸಕ್ತಿ ಮತ್ತು ಉದ್ದೇಶ ಕೂಡ ಸಹಕಾರಿ ಕ್ಷೇತ್ರದಲ್ಲಿ ಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಪಿ.ಎಲ್.ಡಿ.ಬ್ಯಾಂಕ್ ನ ಅದ್ಯಕ್ಷ ಸುದರ್ಶನ್ ಜೈನ ಮಾತನಾಡಿ, ಜನರ ಬೇಡಿಕೆ ಗಳಿಗೆ , ರೈತರಿಗೆ ಪೂರಕವಾಗಿ ಸಹಕಾರಿ ಸಂಘಗಳು ಕೆಲಸ ಮಾಡುತ್ತಿವೆ ಎಂದರು.
ವೇದಿಕೆಯಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಂಜುನಾಥ ಸಿಂಗ್, ತಾಲೂಕು ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್, ಡಿ.ಸಿ.ಸಿ ಬ್ಯಾಂಕ್ ನ ವಿಟ್ಲ ವಲಯ ಮೇಲ್ವಿಚಾರಕ ಎಚ್ ಯೋಗೀಶ್, ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ಕಿಣಿ, ಬಿಸಿರೋಡ್ ಡಿ.ಸಿ.ಸಿ.ಬ್ಯಾಂಕ್ ನ ಶಾಖಾ ವ್ಯವಸ್ಥಾಪಕಿ ಸೌಮ್ಯ ಮತ್ತು ಒಕ್ಕೂಟದ ಉಪಾಧ್ಯಕ್ಷ ಆಲ್ಬರ್ಟ ಡಿ.ಸೊಜ ಉಪಸ್ಥಿತರಿದ್ದರು. ಮಣಿ ನಾಲ್ಕೂರು ಸೇವಾ ಸಹಕಾರಿ‌ಬ್ಯಾಂಕ್ ನ‌ಮುಖ್ಯ ಕಾರ್ಯನಿರ್ವಣಾಧಿಕಾರಿ ಸುಧಾಕರ ಸ್ವಾಗತಿಸಿ, ಕಾವಳ ಪಡೂರು ಸೇವಾ ಸಹಕಾರಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಣಾಧಿಕಾರಿ

ಶಿವಾನಂದ ವಂದಿಸಿದರು. ಇಡ್ಕಿದು ಸೇವಾ ಸಹಕಾರಿ ಬ್ಯಾಂಕ್ ನ ಮುಖ್ಯಕಾರ್ಯನಿರ್ವಾಣಾಧಿಕಾರಿ ಈಶ್ವರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here