Wednesday 14th, May 2025
canara news

ಹಾಡಹಗಲೇ ತಲವಾರು ಹಿಡಿದು ಗೂಂಡಾಗಿರಿ ಮೆರೆದ ತುಳು ಸಿನಿಮಾ ನಟ

Published On : 12 Jun 2018   |  Reported By : canaranews network


ಮಂಗಳೂರು: ಬಂಟ್ವಾಳದಲ್ಲಿ ತುಳು ಚಿತ್ರ ನಟ ಹಾಗು ಕಾಂಗ್ರೆಸ್ ಕಾರ್ಯಕರ್ತನೊರ್ವ ಹಾಡಹಗಲೇ ತಲವಾರು ಝಳಪಿಸಿ ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿರುವ ಘಟನೆ ಸೋಮವಾರ ನಡೆದಿದೆ.ಮಾಜಿ ಸಚಿವ ಬಿ.ರಮಾನಾಥ ರೈ ಅವರ ಕಟ್ಟಾ ಬೆಂಬಲಿಗ ಹಾಗೂ ಕಾಂಗ್ರೆಸ್ ಕಾರ್ಯಕರ್ತನೋರ್ವ ಹಾಡುಹಗಲೇ ಬಿಜೆಪಿ ಕಾರ್ಯಕರ್ತರ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ಪೇಟೆಯ ನಿತ್ಯಾನಂದ ಮಂದಿರದ ಬಳಿ ನಡೆದಿದೆ.

ಸುರೇಂದ್ರ ಬಂಟ್ವಾಳ್ ಎಂಬವರು ತಲವಾರು ಹಿಡಿದು ರಸ್ತೆಯಲ್ಲೇ ಬಿಜೆಪಿ ಕಾರ್ಯಕರ್ತರ ಕೊಲೆಗೆ ಯತ್ನಿಸಿದ್ದಾನೆ ಎಂದು ಅರೋಪಿಸಲಾಗಿದೆ. ಸುರೇಂದ್ರ ಬಂಟ್ವಾಳ ಕೆಲವು ತುಳು ಚಿತ್ರ ಗಳಲ್ಲಿ ನಟಿಸಿದ್ದಾರೆ.ಹಾಡು ಹಗಲೇ ಸುರೇಂದ್ರ ಬಂಟ್ವಾಳ್ ತಲವಾರನ್ನು ಬೀಸಿದ್ದು ಘಟನೆಯಲ್ಲಿ ಗಣೇಶ್ ಮತ್ತು ಪುಷ್ಪರಾಜ್ ಎಂಬವರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.ಈ ಮುಂಚೆಯೂ ಸುರೇಂದ್ರ ಬಂಟ್ವಾಳ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿತ್ತು.ಸ್ಥಳಕ್ಕೆ ಜಿಲ್ಲಾ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here