Thursday 25th, April 2024
canara news

ಮಂಗಳೂರಿನಲ್ಲಿ ಸಂಭ್ರಮದ ರಂಜಾನ್ – ಮುಸ್ಲಿಂ ಧರ್ಮೀಯರಿಂದ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ

Published On : 15 Jun 2018   |  Reported By : canaranews network


ಮಂಗಳೂರು: ಪವಿತ್ರ ರಂಜಾನ್ ಮಾಸದಲ್ಲಿ ಕಠಿಣ ಉಪವಾಸ ವೃತ ನಡೆಸಿದ್ದ ಮುಸಲ್ಮಾನ ಬಾಂಧವರು ಇಂದು ಕರಾವಳಿಯಾದ್ಯಂತ ಸೌಹರ್ದತೆಯ ಸಂದೇಶವನ್ನು ಸಾರುವ ಈದುಲ್ ಪಿತ್ರ್ ಹಬ್ಬವನ್ನು ಆಚರಿಸುತ್ತಿದ್ದಾರೆ.ಕೇರಳದ ಕ್ಯಾಲಿಕಟ್ ಸಮುದ್ರ ತೀರದಲ್ಲಿ ನಿನ್ನೆ ಸಂಜೆ ಚಂದ್ರ ದರ್ಶನ ಆದ ಹಿನ್ನೆಲೆಯಲ್ಲಿ ಇಂದು ಕರಾವಳಿಯಾದ್ಯಂತ ಶಾಂತಿ, ಪ್ರೀತಿ, ಸ್ನೇಹ ಮತ್ತು ಸೌಹರ್ದತೆಯ ಸಂದೇಶವನ್ನು ಸಾರುವ ಈದುಲ್ ಪಿತ್ರ್ ಹಬ್ಬವನ್ನು ಆಚರಿಸಲಾಗುತ್ತಿದೆ.

ಕರಾವಳಿಯಲ್ಲಿ ಎಲ್ಲೆಡೆ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮುಸ್ಲಿಂ ಬಾಂಧವರು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.ಮಂಗಳೂರಿನ ವಿವಿಧ ಮಸೀದಿಗಳಲ್ಲಿ ರಂಜಾನ್ ವಿಶೇಷ ಪ್ರಾರ್ಥನೆ ನಡೆಯುತ್ತಿದ್ದು, ಮುಸ್ಲಿಂ ಬಾಂಧವರು ಭಕ್ತಿ-ಭಾವದಿಂದ ಹಬ್ಬ ಆಚರಿಸುತ್ತಿದ್ದಾರೆ. ಬಾವುಟಗುಡ್ಡೆಯ ಈದ್ಗಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ನಡೆದಿದ್ದು, ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ ಖಾದರ್ ಭಾಗಿಯಾಗಿದ್ದಾರೆ. ಮಾತ್ರವಲ್ಲ, ಸಾಮೂಹಿಕ ನಮಾಜ್ ನಲ್ಲಿ ಪಾಲ್ಗೊಂಡ ಖಾದರ್, ಸಾರ್ವಜನಿಕರ ಜೊತೆ ಪರಸ್ಪರ ಈದುಲ್ ಫಿತ್ರ್ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here