Friday 19th, April 2024
canara news

ಶ್ರೀ ಧ.ಮಂ.ಆಂ. ಮಾಧ್ಯಮ ಶಾಲೆಯಲ್ಲಿ ಭತ್ತದ ನಾಟಿ

Published On : 03 Jul 2018   |  Reported By : Rons Bantwal


ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಪರಿಸರ ಸಂಘದ ವತಿಯಿಂದ, ಮಕ್ಕಳಲ್ಲಿ ಕೃಷಿಯ ಬಗ್ಗೆ ಒಲವು, ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ನಾಟಿಯನ್ನು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಜಂಟಿಯಾಗಿ ನಿರ್ವಹಿಸಿದರು. ಈ ಕಾರ್ಯಕ್ರಮವು ಸಂತೋಷ್‍ರವರ ಮಾರ್ಗದರ್ಶನ ಹಾಗೂ ಶ್ರೀ ಕ್ಷೇತ್ರದ ತೋಟದ ಸಿಬ್ಬಂದಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಮೂಡಿಬಂದಿದೆ.

 

ಗದ್ದೆಯ ಉಳುಮೆಗಾಗಿ ನೇಗಿಲಿನ ಬದಲು ಮಕ್ಕಳಿಂದ ಕೆಸರಿನಾಟವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳೆಲ್ಲಾ ತುಂಬು ಆಸಕ್ತಿಯಿಂದ ಇದರಲ್ಲಿ ಪಾಲ್ಗೊಂಡಿದ್ದು ಉಲ್ಲೇಖನೀಯ. ಈ ಕಾರ್ಯಕ್ರಮದ ಒಟ್ಟು ನಿರ್ವಹಣೆಯನ್ನು ಶಾಲಾ ಸºಶಿP್ಪ್ಷಕಿಯರಾದ ಶ್ರೀಮತಿ ಸೌಮ್ಯಾ ಹಾಗು ಶ್ರೀಮತಿ ಸಂಧ್ಯಾ ನಿರ್ವಹಿಸಿದರು. ಈ ಕಾರ್ಯಕ್ರಮವನ್ನು ಸತತ ಮೂರು ವರ್ಷಗಳಿಂದ ಯಶಸ್ವಿ ಯಾಗಿ ನಡೆಸಿಕೊಂಡು ಬಂದಿರುವುದಾಗಿ ಶಾಲೆಯ ಮುಖ್ಯೋಪದ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ.ಯವರು ತಿಳಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here