ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಪರಿಸರ ಸಂಘದ ವತಿಯಿಂದ, ಮಕ್ಕಳಲ್ಲಿ ಕೃಷಿಯ ಬಗ್ಗೆ ಒಲವು, ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ನಾಟಿಯನ್ನು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಜಂಟಿಯಾಗಿ ನಿರ್ವಹಿಸಿದರು. ಈ ಕಾರ್ಯಕ್ರಮವು ಸಂತೋಷ್ರವರ ಮಾರ್ಗದರ್ಶನ ಹಾಗೂ ಶ್ರೀ ಕ್ಷೇತ್ರದ ತೋಟದ ಸಿಬ್ಬಂದಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಮೂಡಿಬಂದಿದೆ.
ಗದ್ದೆಯ ಉಳುಮೆಗಾಗಿ ನೇಗಿಲಿನ ಬದಲು ಮಕ್ಕಳಿಂದ ಕೆಸರಿನಾಟವನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳೆಲ್ಲಾ ತುಂಬು ಆಸಕ್ತಿಯಿಂದ ಇದರಲ್ಲಿ ಪಾಲ್ಗೊಂಡಿದ್ದು ಉಲ್ಲೇಖನೀಯ. ಈ ಕಾರ್ಯಕ್ರಮದ ಒಟ್ಟು ನಿರ್ವಹಣೆಯನ್ನು ಶಾಲಾ ಸºಶಿP್ಪ್ಷಕಿಯರಾದ ಶ್ರೀಮತಿ ಸೌಮ್ಯಾ ಹಾಗು ಶ್ರೀಮತಿ ಸಂಧ್ಯಾ ನಿರ್ವಹಿಸಿದರು. ಈ ಕಾರ್ಯಕ್ರಮವನ್ನು ಸತತ ಮೂರು ವರ್ಷಗಳಿಂದ ಯಶಸ್ವಿ ಯಾಗಿ ನಡೆಸಿಕೊಂಡು ಬಂದಿರುವುದಾಗಿ ಶಾಲೆಯ ಮುಖ್ಯೋಪದ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ.ಯವರು ತಿಳಿಸಿದ್ದಾರೆ.