Wednesday 14th, May 2025
canara news

ಸಂಚಾರಕ್ಕೆ ಮುಕ್ತಗೊಂಡ ಶಿರಾಡಿ ಘಾಟ್ ರಸ್ತೆ

Published On : 16 Jul 2018   |  Reported By : canaranews network


ಮಂಗಳೂರು: ಮಂಗಳೂರು - ಬೆಂಗಳೂರು ಮಧ್ಯೆ ಸಂಚರಿಸುವ ವಾಹನ ಸವಾರರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ. ಕಾರಣ ಆರು ತಿಂಗಳಿನಿಂದ ವಾಹನ ಸಂಚಾರ ಸಂಪೂರ್ಣ ನಿಷೇಧಗೊಂಡಿದ್ದ ಶಿರಾಢಿಘಾಟ್ ರಸ್ತೆ ಭಾನುವಾರದಿಂದ ಸಂಚಾರಕ್ಕೆ ಮುಕ್ತಗೊಂಡಿದೆಶಿರಾಡಿ ಘಾಟ್ ರಸ್ತೆಯ ಎರಡನೇ ಹಂತದ ಕಾಂಕ್ರೀಟ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ ಹಿನ್ನೆಲೆಯಲ್ಲಿ ಭಾನುವಾರದಿಂದ ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಆದರೆ ಈ ರಸ್ತೆಯಲ್ಲಿ ವಾಹನ ಸವಾರರು ಮೈ ಮರೆತೆರೆ ಪ್ರಪಾತಕ್ಕೆ ಉರುಳಿ ಬೀಳುವ ಆತಂಕ ಕೂಡ ಸೃಷ್ಟಿಯಾಗಿದೆ.ಸುರಕ್ಷತೆ ಕಾಮಗಾರಿ ಮುಗಿಸದೆ ತರಾತುರಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿದ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಎಷ್ಟು ಸುರಕ್ಷಿತ ಎನ್ನುವ ಗೊಂದಲ ಈಗ ಕಾಡತೊಡಗಿದೆ.ಪ್ರತಿ ಮಳೆಗಾಲದ ಸಂದರ್ಭದಲ್ಲೂ ಪ್ರಯಾಣಿಕರಿಗೆ ಭಾರೀ ಸಮಸ್ಯೆ ಕೊಡುತ್ತಿದ್ದ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಗೆ ಕಾಂಕ್ರೀಟ್ ಕಾಮಗಾರಿ ಮಾಡುವ ಕೊನೆಯ ಹಂತಕ್ಕೆ ತಲುಪಿದೆ. ಶಿರಾಡಿಘಾಟ್ ನ 26 ಕಿಲೋಮೀಟರ್ ರಸ್ತೆಗೆ ಕಾಂಕ್ರೀಟ್ ಕಾಮಗಾರಿಗಾಗಿ ಕೇಂದ್ರ ಸರಕಾರ ಸುಮಾರು 183 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಹಮ್ಮಿಕೊಂಡಿತ್ತು.ಮೊದಲ ಹಂತದಲ್ಲಿ ಕೆಂಪುಹೊಳೆಯಿಂದ ಮಾರನಹಳ್ಳಿವರೆಗಿನ 13 ಕಿಲೋಮೀಟರ್ ಉದ್ದದ ರಸ್ತೆ ಕಾಮಗಾರಿಯನ್ನು ಈಗಾಗಲೇ ಮುಗಿಸಲಾಗಿದ್ದು, ಅಡ್ಡಹೊಳೆಯಿಂದ ಕೆಂಪುಹೊಳೆವರೆಗಿನ 13 ಕಿಲೋಮೀಟರ್ ರಸ್ತೆ ಕಾಮಗಾರಿ ಇದೀಗ ಮುಗಿಯುವ ಹಂತದಲ್ಲಿದೆ.ಕಾಮಗಾರಿ ಆರಂಭಗೊಂಡು 6 ತಿಂಗಳು ಕಳೆದಿದ್ದು, ಈ ರಸ್ತೆಯುದ್ದಕ್ಕೂ ವಾಹನ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಇದೀಗ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುವ ಹಿನ್ನೆಲೆಯಲ್ಲಿ ಜುಲೈ 15ರಿಂದಲೇ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here