Wednesday 24th, April 2024
canara news

ಡಾ| ರಜನಿ ವಿ.ಪೈ ಅವರಿಗೆ `ಬೆಂಗಳೂರು ರತ್ನ-2018 ಪ್ರಶಸ್ತಿ' ಪ್ರದಾನ

Published On : 18 Jul 2018   |  Reported By : Rons Bantwal


ಮುಂಬಯಿ, ಜು.17: ಬೆಂಗಳೂರು ರತ್ನ ಮಾಸಪತ್ರಿಕೆ ತನ್ನ 14ನೇ ವಾರ್ಷಿಕೋತ್ಸವವನ್ನು ಕಳೆದ ಸೋಮವಾರ ಬೆಂಗಳೂರಿನ ಕೆಂಪೇಗೌಡನಗರದ ಉದಯಾಭಾನು ಸಾಂಸ್ಕೃತಿಕ ಕಲಾ ಭವನದಲ್ಲಿ ನೇರವೇರಿಸಿತು. ಸಮಾರಂಭದಲ್ಲಿವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಕರ್ನಾಟಕ ವಿಕಾಸರತ್ನ -2018 ಮತ್ತು ಬೆಂಗಳೂರು ರತ್ನ-2018 ಪ್ರಶಸ್ತಿ ಪ್ರದಾನಿ ಗೌರವಿಸಿತು.

ಮುಂಬಯಿನ ಸಮಾಜ ಸೇವಕಿ, ಮುಂಬಯಿ ಕನ್ನಡ ಸಂಘ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಡಾ| ರಜನಿ ವಿನಾಯಕ ಪೈ ಅವರಿಗೆ `ಬೆಂಗಳೂರು ರತ್ನ-2018 ಪ್ರಶಸ್ತಿ' ಪ್ರದಾನಿಸಿ ಗೌರವಿಸಿತು.

ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಮನು ಬಳಿಗಾರ, ಕವಿ ದೊಡ್ಡರಂಗೇ ಗೌಡ, ಶಾಸಕ ರವಿ ಸುಬ್ರಹ್ಮಣ್ಯ, ದೂರದರ್ಶನದ ನಿವೃತ್ತ ಮಹಾ ನಿರ್ದೇಶಕ ಮಹೇಶ್ ಜೋಶಿ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಹಲವಾರು ಸಾಧಕರಿಗೆ ಪ್ರಶಸ್ತಿ ಪ್ರದಾನಿಸಿ ಅಭಿನಂದಿಸಿದರು.

ಮುಂಬಯಿ ಉಪನಗರದ ಮುಲುಂಡ್ ಪಶ್ಚಿಮದಲ್ಲಿ ನೆಲೆಸಿದ ರಜನಿ ಪೈ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಸಿದ್ಧಿ ನಿವಾಸಿ ಆಗಿದ್ದಾರೆ. ಮುಂಬಯಿಯಲ್ಲಿ ತೆರೆಮರೆಯಲ್ಲಿದ್ದು ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here