Wednesday 14th, May 2025
canara news

ಕರಾವಳಿಯಲ್ಲಿ ತಗ್ಗಿದ ಕಡಲ್ಕೊರೆತ: ಸುರಕ್ಷಿತ ಸ್ಥಳಕ್ಕೆ 20 ಕುಟುಂಬ ಸ್ಥಳಾಂತರ

Published On : 19 Jul 2018   |  Reported By : canaranews network


ಮಂಗಳೂರು: ಕರಾವಳಿಯಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮುದ್ರ ರಾಜನ ಆರ್ಭಟ ತಗ್ಗಿದೆ. ಕಳೆದ 5 ದಿನಗಳಿಂದ ಕರಾವಳಿಯ ಉದ್ದಕ್ಕೂ ಕಡಲಿನ ಅಲೆಗಳ ಹೊಡೆತ ಜೋರಾಗಿತ್ತು. ಈ ಪರಿಣಾಮ ಕರಾವಳಿಯಲ್ಲಿ ವ್ಯಾಪಕವಾಗಿ ಕಡಲ್ಕೊರೆತ ಆರಂಭವಾಗಿತ್ತು.ಆದರೆ ಕಳೆದ ರಾತ್ರಿಯಿಂದ ಮಂಗಳೂರು ಹೊರವಲಯದ ಉಳ್ಳಾಲ ಹಾಗೂ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಕಡಲ್ಕೊರೆತದ ಪ್ರಮಾಣ ಕಡಿಮೆಯಾಗಿದೆ.

ಕಡಲ ಅಲೆಗಳ ಅಬ್ಬರ ಕೊಂಚ ತಗ್ಗಿದೆ. ಈ ಹಿನ್ನಲೆಯಲ್ಲಿ ಉಳ್ಳಾಲ ಪ್ರದೇಶದ ಕೈಕೊ, ಕಿಲೇರಿಯಾ ನಗರ , ಮಕ್ಕಚೇರಿ ಯಲ್ಲಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.ಈ ಪ್ರದೇಶದಲ್ಲಿ ಅಪಾಯದಲ್ಲಿದ್ದ 41 ಮನೆಗಳನ್ನು ಉಳ್ಳಾಲ ನಗರಸಭೆ ಗುರುತಿಸಿದ್ದು, 20 ಕುಟುಂಬಗಳನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇನ್ನುಳಿದವರು ರಾತ್ರಿ ವೇಳೆ ಸಂಬಂಧಿಕರ ಮನೆಗಳಿಗೆ ತೆರಳಿದ್ದರು. ಕಡಲ್ಕೊರೆತಕ್ಕೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ 8 ಮನೆಗಳು ಧ್ವಂಸಗೊಂಡಿದ್ದವು . ಕಡಲ ಭೋರ್ಗರೆತ ಹೆಚ್ಚಾಗಿದ್ದ ಕಾರಣ ಸ್ಥಳೀಯ ನಿವಾಸಿಗಳಲ್ಲಿ ಯಾವಾಗ ಏನಾಗುತ್ತೋ ಅನ್ನೋ ಜೀವ ಭಯ ಮನೆ ಮಾಡಿತ್ತು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here