ಮುಂಬಯಿ,ಜು.25: ಬಿಲ್ಲವರ ಅಸೋಸಿಯೇಶನ್, ಮುಂಬಯಿ ವತಿಯಿಂದ ಗುರು ಪೂರ್ಣಿಮೆ ವಿಶೇಷ ಪೂಜೆಯನ್ನು ಇದೇ ಜು.28ರ ಶನಿವಾರ ಸಂಜೆ 5.30 ಗಂಟೆಯಿಂದ ರಾತ್ರಿ 8.00ರ ತನಕ ಸಾಂತಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ಜರಗಿಸಲಾಗುವುದು.
ಅಂದು ಸಂಜೆ ಭಜನೆ, ಮಂಗಳಾರತಿ, ನಂತರ ತೀರ್ಥ ಪ್ರಸಾದ ಹಾಗೂ ಮಾಜಿ ಅಧ್ಯಕ್ಷರಾದ ಎಲ್.ವಿ ಅವಿೂನ್ ಅವರ ಅನ್ನನಿಧಿ ವತಿಯಿಂದ ಅನ್ನಪ್ರಸಾದ ಜರಗಲಿದೆ. ಭಕ್ತಾಧಿಗಳು ಗುರು ಪೂರ್ಣಿಮೆಯ ಪೂಜೆಗೆ ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ತೀರ್ಥ ಪ್ರಸಾದ ಸ್ವೀಕರಿಸಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಕೃಪೆಗೆ ಪಾತ್ರರಾಗಬೇಕಾಗಿ ಅಧ್ಯಕ್ಷ ಚಂದ್ರಶೇಖರ್ ಎಸ್.ಪೂಜಾರಿ, ಗೌ| ಪ್ರ| ಕಾರ್ಯದರ್ಶಿ ಧನಂಜಯ ಶಾಂತಿ, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿ ಗೌರವ ಕಾರ್ಯಾಧ್ಯಕ್ಷ ಮೋಹನ್ದಾಸ್ ಜಿ.ಪೂಜಾರಿ, ಮತ್ತು ಗೌರವ ಕಾರ್ಯದರ್ಶಿ ರವೀಂದ್ರ ಎ.ಶಾಂತಿ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.