Wednesday 14th, May 2025
canara news

ಸಚಿವೆ ಡಾ| ಜಯಮಾಲಾ ಅವರಿಗೆ ಡಾ| ಸದಾನಂದ ಪೆರ್ಲ ಅವರ ಕೃತಿ `ಕಾಸರಗೋಡಿನ ಕನ್ನಡ ಹೋರಾಟ' ಹಸ್ತಾಂತರ

Published On : 27 Jul 2018   |  Reported By : Rons Bantwal


ಮುಂಬಯಿ (ಮಂಗಳೂರು), ಜು.27: ಕಾಸರಗೋಡ್ ಅಲ್ಲಿನ ಕನ್ನಡಿಗರ ಮತ್ತು ಕನ್ನಡದ ಜ್ವಲಂತ ಸಮಸ್ಯೆಯನ್ನು ಬಿಂಬಿಸುವ ಸಂಶೋಧನಾ ಪ್ರಬಂಧ `ಕಾಸರಗೋಡಿನ ಕನ್ನಡ ಹೋರಾಟ'ದ ಕೃತಿಕಾರ ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ| ಸದಾನಂದ ಪೆರ್ಲ ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವೆ ಡಾ| ಜಯಮಾಲಾ ಅವರಿಗೆ `ಕಾಸರಗೋಡಿನ ಕನ್ನಡ ಹೋರಾಟ'ದ ಕೃತಿ ಇತ್ತೀಚಿಗೆ ಮಂಗಳೂರುನಲ್ಲಿ ನೀಡಿದರು.

ಕಾಸರಗೋಡುನ ಜ್ವಲಂತ ಸ್ಥಿತಿಗತಿ ಅಧ್ಯಯನ ಮಾಡಲು ಆಸಕ್ತರಾದ ಸಚಿವರಿಗೆ ಅಲ್ಲಿನ ಕನ್ನಡ ಹೋರಾಟ, ಹೋರಾಟಗಾರರು, ಮತ್ತು ಮಹಾಜನ ವರದಿಯಲ್ಲಿ ಉಲ್ಲೇಖಿತ ಅಂಶಗಳ ಬಗ್ಗೆ ಸವಿವರ ಮಾಹಿತಿಯ ಕೃತಿಯಾಗಿರುವುದರಿಂದ ಇದನ್ನು ಖುದ್ದಾಗಿ ಓದಿ ತಿಳಿದುಕೊಳ್ಳುವೆ ಮತ್ತು ಇಂತಹ ಉತ್ತಮ ಅಧ್ಯಯನ ಕಾರ್ಯ ನಡೆಸಿ ದಾಖಲೆ ಮಾಡಿದ ಅಂಶ ಪ್ರಶಂಸನೀಯ ಎಂದು ಸಚಿವರು ನುಡಿದರು.

ಸಿನಿಮಾ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಕಾಸರಗೋಡುನ ಸ್ಥಿತಿಗತಿ ತಿಳಿಯಲು ಇದೊಂದು ಆಕರ ಗ್ರಂಥ ಎಂದು ಸಚಿವರಿಗೆ ವಿಶ್ಲೇಷಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ತುಳು ಅಕಾಡೆಮಿ ಸದಸ್ಯ ತಾರಾನಾಥ ಗಟ್ಟಿ ಕಾಪಿಕಾಡ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here