Friday 26th, April 2024
canara news

ಅಕ್ರಮ ಜಾನುವಾರು ಸಾಗಾಟ : ವಿಟ್ಲದಲ್ಲಿ ಮೂವರ ಬಂಧನ

Published On : 30 Jul 2018   |  Reported By : canaranews network


ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬ ಭಜರಂಗ ದಳ ಕಾರ್ಯಕರ್ತ ಎಂಬುದು ಬೆಳಕಿಗೆ ಬಂದಿದೆ.ಶುಕ್ರವಾರ ತಡರಾತ್ರಿ ವಿಟ್ಲದ ಪಡ್ನೂರು ಗ್ರಾಮದ ಕಡಂಬು ಜಂಕ್ಷನ್ ಎಂಬಲ್ಲಿ ವಾಹನ ಒಂದನ್ನು ತಡೆದು ಪರಿಶೀಲನೆ ನಡೆಸಿದಾಗ ಈ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಟ್ವಾಳದ ಪಡ್ನೂರು ಗ್ರಾಮದ ಶಶಿ ಕುಮಾರ್ (48) ಮತ್ತು ಅಬ್ದುಲ್ ಹಾರಿಸ್ (21) ಎಂದು ಗುರುತಿಸಲಾಗಿದೆ. ಜಾನುವಾರು ಸಾಗಾಟಕ್ಕೆ ಬಳಸಿದ ವಾಹನ ಹಾಗೂ ಅದರಲ್ಲಿದ್ದ 4 ದನ ಹಾಗು ಒಂದು ಕರುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತರಲ್ಲಿ ಒಬ್ಬನಾದ ಶಶಿಕುಮಾರ್ ಭಜರಂಗದಳದ ಕಾರ್ಯಕರ್ತ ಎಂದು ಹೇಳಲಾಗಿದೆ. ಮತ್ತೊಬ್ಬ ಆರೋಪಿ ಅಬ್ದುಲ್ ಹಾರಿಸ್ ಈ ಹಿಂದೆ ಅಳಿಕೆ ಎಂಬಲ್ಲಿ ನಡೆದ ದನ ಕಳವು ಪ್ರಕರಣದಲ್ಲಿ ಕೂಡ ಭಾಗಿಯಾಗಿದ್ದ ಎಂದು ಪೊಲೀಸ್ ಮೂಲಗಳು ಹೇಳಿದೆ. ಅಲ್ಲದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೂಡ ಈತನ ವಿರುದ್ದ ಪ್ರಕರಣಗಳು ದಾಖಲಾಗಿವೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here