Friday 26th, April 2024
canara news

ಎತ್ತಿನಹೊಳೆ ಯೋಜನೆ ತ್ವರಿತಗೊಳಿಸಲು ಸಿಎಂ ಸೂಚನೆ, ಪರಿಸರ ಹೋರಾಟಗಾರರ ಅಸಮಾಧಾನ

Published On : 08 Aug 2018   |  Reported By : canaranews network


ಮಂಗಳೂರು: ನೇತ್ರಾವತಿ ನದಿ ತಿರುಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಯನ್ನು ತ್ವರಿತಗೊಳಿಸಲು ಸೂಚಿಸಿರುವ ಮುಖ್ಯಮಂತ್ರಿ ಕುಮಾರ ಸ್ವಾಮಿ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ವಂಚನೆ ಮಾಡಿದ್ದಾರೆ ಎಂದು ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಆಗುವ ಮುನ್ನ ಈ ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದಿದ್ದರು. ಇದೊಂದು ಭ್ರಷ್ಟಾಚಾರದ ಯೋಜನೆ, ಇದಕ್ಕೆ ಅವಕಾಶ ನೀಡುವುದಿಲ್ಲ. ಅಧಿಕಾರಕ್ಕೆ ಬಂದಲ್ಲಿ ಯೋಜನೆ ವಿರುದ್ಧ ವಿಚಾರಣೆ ನಡೆಸುವುದಾಗಿ ಹೇಳಿದ್ದ ಕುಮಾರ ಸ್ವಾಮಿ ಇಂದು ಅದರ ಪರವಾಗಿದ್ದಾರೆ. ಕುಮಾರ ಸ್ವಾಮಿ ಇದೀಗ ಕಾಂಗ್ರೆಸ್ ಪಕ್ಷದಿಂದ ಸರಕಾರ ರಚಿಸಿದ್ದು, ಅವರ ಜೊತೆಗೆ ಯೋಜನೆ ಜಾರಿಗೆ ಯತ್ನಿಸುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆಗಳೂ ಬುಡಮೇಲಾಗಿದೆ ಎಂದಿದ್ದಾರೆ. ಈ ಬಗ್ಗೆ ನಾವು ಸಿಎಂಗೆ ಮನವಿ ನೀಡಿ ಯೋಜನೆ ತಡೆಯಲು ಯತ್ನಿಸಲಿದ್ದೇವೆ ಎಂದು ಹೇಳಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here