ಮುಂಬಯಿ, ಆ.09: ರಾಮರಾಜ ಕ್ಷತ್ರೀಯ ಸೇವಾ ಸಂಘ ಮುಂಬಯಿ ಇದರ ಮಹಿಳಾ ವಿಭಾಗವು ಇದೇ ಆಗಸ್ಟ್.12ರ ರವಿವಾರ ಬೆಳಿಗ್ಗೆ 10.00 ಗಂಟೆಯಿಂದ ಸಾಂತಾಕ್ರೂಜ್ ಪೂರ್ವದಲ್ಲಿನ ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಶ್ರಾವಣ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.
ಆ ಪ್ರಯುಕ್ತ ಸಂಘದ ಸದಸ್ಯರು, ಮಹಿಳಾ ಸದಸ್ಯೆಯರು ಹಾಗೂ ಮಕ್ಕಳು ವಿವಿಧ ವಿನೋದಾವಳಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತ ಪಡಿಸಲಿದ್ದಾರೆ. ಜೊತೆಗೆ ಕನ್ನಡ ಕಲಿಕೆ, ಹರಟೆ ಕಾರ್ಯಕ್ರಮ ಮತ್ತು ನಮ್ಮ ಜೀವವನ್ನು ಯಾವ ರೀತಿಯಾಗಿ ಸಮತೋಲನದಲ್ಲಿ ಇರಿಸಬೇಕು ಎಂಬ ಆರೋಗ್ಯ ಸಂಜೀವಿನಿ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.
ಧಾರ್ಮಿಕ ಕಾರ್ಯಕ್ರಮವಾಗಿ ಅರಸಿಣ ಕುಂಕುಮ ಕಾರ್ಯಕ್ರಮ ನಡೆಸಲಾಗುವುದು. ಆ ನಿಮಿತ್ತ ಸಮಾಜ ಎಲ್ಲಾ ಸದಸ್ಯ ಬಾಂಧವರು ಈ ಸಂಭ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಮಹಿಳಾ ವಿಭಾಗದ ಅಧ್ಯಕ್ಷೆ ರೀನಾ ಕೆ. ಬೋಳಾರ್, ಗೌ| ಕಾರ್ಯದರ್ಶಿ ಚಿತ್ರಾ ಎಂ.ರಾವ್, ಗೌ| ಕೋಶಾಧಿಕಾರಿ ಪ್ರಜ್ಞ ಎಸ್.ರಾವ್ ಪತ್ರಿಕಾ ಪ್ರಕಟಣೆ ವಿನಂತಿಸಿ ಕೊಂಡಿದ್ದಾರೆ.