ಹಂಚಿಕೊಂಡ ಶಂಕರ್ ಶೆಟ್ಟಿ ವಿರಾರ್-ಹರೀಶ್ ಎನ್.ಶೆಟ್ಟಿ-ಚಂದ್ರಶೇಖರ ಬೆಳ್ಚಡ
ಮುಂಬಯಿ, ಸೆ.01: ಅಸೋಸಿಯೇಶನ್ ಆಫ್ ಕನ್ನಡ ಕೂಟ'ಸ್ ಆಫ್ ಅಮೇರಿಕಾ ಸಂಸ್ಥೆಯು ಉತ್ತರ ಟೆಕ್ಸಾಸ್ ಮಲ್ಲಿಗೆ ಕನ್ನಡ ಕೂಟ ಇದರ ಆಶ್ರಯದಲ್ಲಿ ಅಕ್ಕ ಸಂಸ್ಥೆಯು ಇಂದಿನಿಂದ ಸೆ.02ರ ತ್ರಿದಿನಗÀಳಲ್ಲಿ ಅಮೆರಿಕದ ಡಾಲಸ್ ನಗರದ ಶೆರಟಾನ್ ಸಮಾವೇಶ ಸಭಾಗೃಹದಲ್ಲಿ ಆಯೋಜಿಸಿದ್ದ ಹತ್ತನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಬೃಹನ್ಮುಂಬಯಿನ ಪ್ರತಿಷ್ಠಿತ ಸಾಮಾಜಿಕ ಸಂಸ್ಥೆಗಳ ಧುರೀರಾದ ವಿೂರಾ-ಡಹಾಣು ಬಂಟ್ಸ್ ಸಂಸ್ಥೆಯ ಗೌರವಾಧ್ಯಕ್ಷ, ರೈಲ್ವೇ ಯಾತ್ರಿ ಸಂಘ ಮುಂಬಯಿ ಅಧ್ಯಕ್ಷ ಶಂಕರ್ ಬಿ.ಶೆಟ್ಟಿ ವಿರಾರ್, ರತಿ ಶಂಕರ್ ಶೆಟ್ಟಿ, ಮಲಾಡ್ ಕನ್ನಡ ಸಂಘ ಇದರ ಅಧ್ಯಕ್ಷ ಹರೀಶ್ ಎನ್.ಶೆಟ್ಟಿ, ವನಿತಾ ಹರೀಶ್ ಶೆಟ್ಟಿ, ತೀಯಾ ಸಮಾಜ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಆರ್.ಬೆಳ್ಚಡ ಮತ್ತು ದಿವಿಜಾ ಚಂದ್ರಶೇಖರ್ ದಂಪತಿಗಳು ಮತ್ತು ನಟ ಶ್ರೀನಾಥ್ ಭಾಗವಹಿಸಿ ಸಮ್ಮೇಳನ ವೇದಿಕೆ ಹಂಚಿ ಕೊಂಡರು. ಈ ಶುಭಾವಸರದಲ್ಲಿ ಭರತನಾಟ್ಯ ನೃತ್ಯ ಪ್ರದರ್ಶನಕ್ಕೆ ಸನ್ನದ್ಧರಾದ ಮುಂಬಯಿ ಮಹಾನಗರದಲ್ಲಿನ ಅಪ್ರತಿಮ ಕಲಾವಿದೆ, ನೃತ್ಯ ಕಲಾ ವಸುಧರೆ ಕು| ಪ್ರಿಯಂಜಲಿ ರಾವ್ ಅವರಿಗೆ ಅಭಿನಂದಿಸಿದರು.