ಮುಂಬಯಿ, ಸೆ.04: ಇತ್ತೀಚೆಗೆ ಸಯಾನ್ ಪಶ್ಚಿಮದಲ್ಲಿನ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ನಡೆದ ಭಂಡಾರಿ ಸೇವಾ ಸಮಿತಿ ಮುಂಬಯಿ ಇದರ 65ನೇ ವಾರ್ಷಿಕ ಮಹಾಸಭೆಯಲ್ಲಿ 2018-2020ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ನ್ಯಾಯವಾದಿ ರಾಮಣ್ಣ ಎಂ.ಭಂಡಾರಿ ಮತ್ತು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಗಿ ಶಾಲಿನಿ ಆರ್.ಭಂಡಾರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಗೊಂಡರು.
Adv. R.M Bhandary (President) ShashidharBhandary (Hon. Gen Secreatary)
Shri.Karunakar Bhandary (Hon. Treasurer) Shalini R.Bhandary (Chairperson, Ladies Wing)
ನಡೆಸಲ್ಪಟ್ಟ ಕಾರ್ಯಕಾರಿ ಸಭೆಯಲ್ಲಿ 2018-2020ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಉಪಾಧ್ಯಕ್ಷರುಗಳಾಗಿ ಪ್ರಭಾಕರ್ ಪಿ.ಭಂಡಾರಿ ಥಾಣೆ ಮತ್ತು ಪುರುಷೋತ್ತಮ ಜಿ.ಭಂಡಾರಿ, ಗೌ| ಪ್ರ| ಕಾರ್ಯದರ್ಶಿ ಆಗಿ ಶಶಿಧರ್ ಡಿ.ಭಂಡಾರಿ, ಗೌ| ಕೋಶಾಧಿಕಾರಿ ಆಗಿ ಕರುಣಾಕರ ಎಸ್.ಭಂಡಾರಿ, ಜೊತೆ ಕಾರ್ಯದರ್ಶಿಗಳಾಗಿ ರಂಜಿತ್ ಎಸ್.ಭಂಡಾರಿ ಮತ್ತು ನ್ಯಾ| ಶಾಂತರಾಜ ಡಿ.ಭಂಡಾರಿ, ಜೊತೆ ಕೋಶಾಧಿಕಾರಿ ಪ್ರಕಾಶ್ ಭಂಡಾರಿ ಮತ್ತು ಸುಭಾಷ್ ಭಂಡಾರಿ, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ನ್ಯಾಯವಾದಿ ಶೇಖರ ಎಸ್.ಭಂಡಾರಿ, ವಿಜಯ ಆರ್.ಭಂಡಾರಿ, ನಾರಾಯಣ ಆರ್.ಭಂಡಾರಿ, ಶೋಭಾ ಸುರೇಶ್ ಭಂಡಾರಿ ಕಡಂದಲೆ, ಪಲ್ಲವಿ ರಂಜಿತ್ ಭಂಡಾರಿ, ನ್ಯಾ| ಶ್ಯಾಮ ಆರ್.ಭಂಡಾರಿ, ಪ್ರಶಾಂತ್ ಭಂಡಾರಿ ಪುಣೆ, ಜಯಶೀಲ ಯು.ಭಂಡಾರಿ, ಕೇಶವ ಟಿ.ಭಂಡಾರಿ, ರಾಕೇಶ್ ಎಸ್.ಭಂಡಾರಿ, ಜಯ ಪಿ.ಭಂಡಾರಿ, ವಿಶ್ವನಾಥ್ ಬಿ. ಭಂಡಾರಿ, ರುಕ್ಮಯ ಭಂಡಾರಿ, ಸಂತೋಷ್ ಭಂಡಾರಿ, ರಮಾನಂದ ಕೆ.ರುಕ್ಮಯ ಭಂಡಾರಿ, ಕರುಣಾಕರ ಭಂಡಾರಿ, ಪದ್ಮನಾಭ ಸಿ.ಭಂಡಾರಿ, ಬಾಲಕೃಷ್ಣ ಪಿ.ಭಂಡಾರಿ, ಪ್ರಕಾಶ್ ಎಸ್.ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಗಿ ಶಾಲಿನಿ ಆರ್.ಭಂಡಾರಿ, ಉಪ ಕಾರ್ಯಾಧ್ಯಕ್ಷೆ ಆಗಿ ರೇಖಾ ಎ.ಭಂಡಾರಿ, ಗೌರವ ಕಾರ್ಯದರ್ಶಿ ಆಗಿ ಜಯಸುಧಾ ಟಿ.ಭಂಡಾರಿ ಆಯ್ಕೆಗೊಂಡರು.
ನಿರ್ಗಮನ ಪದಾಧಿಕಾರಿಗಳಾದ ನಿರ್ಗಮನ ಅಧ್ಯಕ್ಷ ನ್ಯಾಯವಾದಿ ಶೇಖರ ಎಸ್.ಭಂಡಾರಿ, ಗೌ| ಪ್ರ| ಕಾರ್ಯದರ್ಶಿ ವಿಜಯ ಆರ್.ಭಂಡಾರಿ, ಗೌರವ ಕೋಶಾಧಿಕಾರಿ ರಮೇಶ್ ವಿ.ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಸುರೇಶ್ ಭಂಡಾರಿ ಕಡಂದಲೆ, ಮಾಜಿ ಅಧ್ಯಕ್ಷ ಬಾಲಕೃಷ್ಣ ಪಿ.ಭಂಡಾರಿ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ನ ಆಡಳಿತ ಮೊಕ್ತೇಸರ, ಭಂದಾರಿ ಮಹಾ ಮಂಡಲದಸ್ಥಾಪಕಾಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ, ಮೊದಲಾದವರು ಉಪಸ್ಥಿತರಿದ್ದರು. ಮತ್ತಿತರರು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಶುಭಾರೈಸಿದರು.