ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶ್ರೀ ಜಿ. ಶಂಕರ ಪ್ಯಾಮಿಲಿ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶುಭದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ರವಿದಾಸ ಶೆಟ್ಟಿ ಇವರ ಉತ್ತಮ ಕ್ರಿಯಾಶೀಲ ಶೈಕ್ಷಣಿಕ ಆಡಳಿತ ಹಾಗೂ ಶಾಲೆ ಮತ್ತು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ದುಡಿದಿರುವುದನ್ನು ಗುರುತಿಸಿ “ಜಿಲ್ಲಾ ಮಟ್ಟದ ಪ್ರೌಢಶಾಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ”ಆಯ್ಕೆಯಾಗಿರುತ್ತಾ.
ದಿನಾಂಕ 05.09.2018 ರಂದು ಉಡುಪಿ ಶ್ಯಾಮಿಲಿ ಸಭಾಂಗಣದಲ್ಲಿ ಪ್ರಶಸ್ತಿ ಸ್ವೀಕರಿಸಲಿರುವ ಇವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಶಸ್ತಿಯನ್ನು ಪಡೆದು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಲಿ ಎಂದು ಶಾಲೆಯ ಸ್ಥಾಪಕ ಅಧ್ಯಕ್ಷ ಡಾ.ಎನ್.ಕೆ. ಬಿಲ್ಲವ ಶುಭಕೋರಿದರು. ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಹ ಶಿಕ್ಷಕರು ಅಭಿನಂದಿಸಿದರು.