Wednesday 14th, May 2025
canara news

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮುಲುಂಡ್ ಸ್ಥಳೀಯ ಕಚೇರಿಯಿಂದ ನಾರಾಯಣ ಗುರುಗಳ 164ನೇ ಜಯಂತ್ಯೋತ್ಸವ-ಶನೀಶ್ವರ ಗ್ರಂಥ ಪಾರಾಯಣ

Published On : 25 Sep 2018   |  Reported By : Rons Bantwal


ಮುಂಬಯಿ, ಸೆ.25: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಮುಲುಂಡ್ ಸ್ಥಳೀಯ ಕಚೇರಿಯು ಇಂದಿಲ್ಲಿ ಶನಿವಾರ ಅಪರಾಹ್ನ ಮುಲುಂಡ್ ಪೂರ್ವದ ನೀಲಂ ನಗರದಲ್ಲಿನ ಶ್ರೀ ವರ್ಧನ್ ಸಭಾಗೃಹದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತ್ಯೋತ್ಸವ ಸಂಭ್ರಮೋಲ್ಲಾಸದಿಂದ ಆಚರಿಸಿದ್ದು, ಜೊತೆಗೆ ಸಾರ್ವಜನಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ ಮಹಾಪೂಜೆ ನೆರವೇರಿಸಿತು.

ಜಯಂತ್ಯೋತ್ಸವ ಪ್ರಯುಕ್ತ ಮಧ್ಯಾಹ್ನ ಬ್ರಹ್ಮಶ್ರೀ ನಾರಾಯಣ ಗುರುಪೂಜೆ ನಡೆಸಿದ್ದು ಸಂಜೆ ಶ್ರೀರಾಧಾಕೃಷ್ಣ ಶ್ರೀ ಶನೀಶ್ವರ ಮಂದಿರ ಡೊಂಬಿವಲಿ ಇದರ ಭಕ್ತಾವೃಂದವು ಶ್ರೀ ಶನೀಶ್ವರ ಗ್ರಂಥ ಪಾರಾಯಣ ಮಹಾಪೂಜೆ ನಡೆಸಿದರು ಅನ್ನ ಸಂತರ್ಪಣೆ ಜರಗಿತು. ವಿದ್ವಾನ್ ಪ್ರಕಾಶ್ ಭಟ್ ಕನ್ನಂಗಿ ತಮ್ಮ ಪೌರೋಹಿತ್ಯದಲ್ಲಿ ಪೂಜಾಧಿಗಳನ್ನು ನೆರವೇರಿಸಿ ಮಂಗಳಾರತಿಗೈದು ಪ್ರಸಾದ ವಿತರಿಸಿ ಹರಸಿದರು. ಮುಲುಂಡ್ ಸ್ಥಳೀಯ ಕಚೇರಿ ಕಾರ್ಯಾಧ್ಯಕ್ಷ ಕೆ.ಸುರೇಶ್‍ಕುಮಾರ್ ಮತ್ತು ರತ್ನಾ ಸುರೇಶ್‍ಕುಮಾರ್ ಪೂಜಾಧಿಗಳ ಯಜಮಾನತ್ವ ವಹಿಸಿದ್ದರು.

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ, ಅಸೋಸಿಯೇಶನ್‍ನ ಉಪಾಧ್ಯಕ್ಷ ದಯಾನಂದ್ ಆರ್.ಪೂಜಾರಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ.ಬಂಗೇರ, ಮಾಜಿ ಮಹಿಳಾಧ್ಯಕ್ಷೆ ಶಕುಂತಳಾ ಕೆ.ಕೋಟ್ಯಾನ್ (ಕೇಂದ್ರ ಸಮಿತಿ ಪ್ರತಿನಿಧಿ), ಮುಲುಂಡ್ ಸ್ಥಳೀಯ ಕಚೇರಿ ಗೌರವ ಕಾರ್ಯಾಧ್ಯಕ್ಷ ಕೆ.ಪಿ ಸಂಜೀವ, ಉಪಾಧ್ಯಕ್ಷರುಗಳಾದ ರವಿ ಕೋಟ್ಯಾನ್ ಮತ್ತು ಶಂಕರ ಅವಿೂನ್, ಗೌ| ಕಾರ್ಯದರ್ಶಿ ಸುಶೀಲ್ ಸಾಲಿಯಾನ್, ಗೌ| ಕೋಶಾಧಿಕಾರಿ ಶಂಕರ ಜೆ.ಪೂಜಾರಿ, ರಾಜಾ ವಿ.ಸಾಲ್ಯಾನ್ ಹಾಲಿ ಮತ್ತು ಮಾಜಿ ಪದಾಧಿಕಾರಿಗಳು ಸೇರಿದಂತೆ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಮುಖ್ಯಸ್ಥರು, ಸದಸ್ಯರನೇಕರು ಉಪಸ್ಥಿತರಿದ್ದರು.





More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here