Friday 26th, April 2024
canara news

ಪರೀಕ್ಷಾ ಪೂರ್ವಭಾವಿ ಸಿದ್ಧತೆಯ ಕಾರ್ಯಾಗಾರ

Published On : 04 Nov 2018   |  Reported By : Gurudatt Somayaji


ಕುಂಜಾರುಗಿರಿ ಪಾಜಕದ ಆನಂದತೀರ್ಥ ವಿದ್ಯಾಲಯದ ವಿದ್ಯಾರ್ಥಿಗಳಿಗೆ "ಪರೀಕ್ಷೆಯನ್ನು ಎದುರಿಸುವುದು ಹೇಗೆ" ಎಂಬ ವಿಷಯದ ಕುರಿತಾದ ಕಾರ್ಯಾಗಾರವನ್ನು ಜೆಸಿಐ ರಾಷ್ಟ್ರೀಯ ತರಬೇತುದಾರ ರಾಜೇಂದ್ರ ಭಟ್ ಇತ್ತೀಚಿಗೆ ನಡೆಸಿಕೊಟ್ಟರು.

ಈ ತರಬೇತಿ ಕಾರ್ಯಕ್ರಮದಲ್ಲಿ ಪರೀಕ್ಷಾ ವಿಧಾನಗಳು , ಸಮಯ ಪರಿಪಾಲನಾ ಸೂತ್ರಗಳು , ನೆನಪಿನ ಶಕ್ತಿಯನ್ನು ವೃದ್ಧಿಸುವ ವಿಧಾನ, ಒತ್ತಡ ನಿರ್ವಹಣೆ , ವೇಳಾಪಟ್ಟಿ ತಯಾರಿ , ವ್ಯಕ್ತಿತ್ವ ಉನ್ನತಿಗೆ ಕೌಶಲಗಳು ಹೀಗೆ ಹಲವು ಆಯಾಮಗಳನ್ನು ಸೂಕ್ಷ್ಮವಾಗಿ ಅವಲೋಕಿಸಲಾಯಿತು . ಪ್ರಾತ್ಯಕ್ಷಿಕೆ ಮತ್ತು ಪ್ರಾಯೋಗಿಕ ಗೇಮ್ಸ್ ಗಳ ಮೂಲಕ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು .

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಗೀತಾ ಎಸ್. ಕೋಟ್ಯಾನ್ , ಆಡಳಿತಾಧಿಕಾರಿ ಗುರುದತ್ ಸೋಮಯಾಜಿ , ಮುಖ್ಯ ವಾರ್ಡನ್ ನಾಗರಾಜ್ ತಲ್ಲಂಜೆ ಮತ್ತು ಶಿಕ್ಷಕರು ಭಾಗವಹಿಸಿದ್ದರು . ಮಲ್ಲಿಕಾ ನಿರೂಪಿಸಿ ವಂದಿಸಿದರು .




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here