ಕುಂಜಾರುಗಿರಿ ಪಾಜಕ ಆನಂದತೀರ್ಥ ವಿದ್ಯಾಲಯದ ವಿದ್ಯಾರ್ಥಿಗಳು ಕರಾಟೆಯಲ್ಲಿ ಸಾಧನೆ ಮೆರೆದಿದ್ದಾರೆ. ಮೂಲ್ಕಿಯಲ್ಲಿ ಇತ್ತೀಚಿಗೆ ನಡೆದ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ವಿದ್ಯಾಲಯದ ಹತ್ತನೇ ತರಗತಿಯ ರೋಹಿತ್ ಮತ್ತು ಚೇತನ್ , ಒಂಭತ್ತನೇ ತರಗತಿಯ ಗೌತಮ್, ಸುದೀಪ್ ಮತ್ತು ಶಶಿ 'ಕಾಟಾ' ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ . ಉಜ್ವಲ್, ಮನೀಶ್ ಮತ್ತು ಅಮೋಘ್ ಇವರು ಇದೇ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ . ಯತಿನ್ ಇವರು 'ಕಾಟಾ' ಮತ್ತು ' ಕುಮಿಟೆ' ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ .