ನ.11: ಮೈಸೂರು ಅಸೋಸಿಯೇಶನ್ ಸಭಾಗೃಹದಲ್ಲಿ ಸಂಭ್ರಮಸಡಗರ
ಮುಂಬಯಿ, ನ.08: ಮಹಾನಗರದಲ್ಲಿನ ಸಮುದಾಯದ ಪ್ರತಿಷ್ಠಿತ ಸಂಸ್ಥೆಯಲ್ಲೊಂದಾಗಿದ್ದು ಕಳೆದ ಸುಮಾರು ಎರಡು ದಶಕಗಳಿಂದ ಸಕ್ರೀಯವಾಗಿ ಸಮುದಾಯ ಮತ್ತು ಸಮಾಜದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಗಾಣಿಗ ಸಮಾಜ ಮುಂಬಯಿ ತನ್ನ 21ನೇ ವರ್ಧಂತ್ಯೋತ್ಸವವನ್ನು ಇದೇ ನ.11ನೇ ಭಾನುವಾರ ಮಾಟುಂಗಾ ಪೂರ್ವದ (ಸೆಂಟ್ರಲ್ ರೈಲ್ವೇ) ಭಾವುದಾಜಿ ರಸ್ತೆಯಲ್ಲಿನ ಮೈಸೂರು ಅಸೋಸಿಯೇಶನ್ ಮುಂಬಯಿ ಇದರ ಸಭಾಗೃಹದಲ್ಲಿ ಸಂಸ್ಥೆಯ ಅಧ್ಯಕ್ಷ ಕುತ್ಪಾಡಿ ರಾಮಚಂದ್ರ ಎಂ.ಗಾಣಿಗ ಅವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ಸಂಭ್ರಮಿಸಲಿದೆ. ಅಂದು ಬೆಳಿಗ್ಗೆ 9.00 ಗಂಟೆಗೆ ವಾರ್ಷಿಕೋತ್ಸವ ಸಂಭ್ರಮ ಉದ್ಘಾಟಿಸಲಾಗುತ್ತಿದ್ದು, ಸೋಮಕ್ಷತ್ರೀಯ ಗಾಣಿಗ ಸಮಾಜ ಉಡುಪಿ ಜಿಲ್ಲೆ ಅಧ್ಯಕ್ಷ ಕೆ.ಗೋಪಾಲ್ ಆಗಮಿಸಿ ಚಾಲನೆ ನೀಡಲಿದ್ದಾರೆ ಎಂದು ಸಂಸ್ಥೆಯ ಉಪಾಧ್ಯಕ್ಷರುಗಳಾದ ಬಿ.ವಿ ರಾವ್ ಮತ್ತು ಭಾಸ್ಕರ ಎಂ.ಗಾಣಿಗ ತಿಳಿಸಿದ್ದಾರೆ.
K D Shetty Ramachandra Ganiga
Mamata D.Rao Raghuram Baikady
ಸಂಜೆ 4.00 ಗಂಟೆಗೆ ಸಮಾರೋಪ ಸಮಾರಂಭ ಮತ್ತು ಸನ್ಮಾನ ಸಂಭ್ರಮ ನಡೆಸಲಾಗುತ್ತಿದ್ದು ಮುಖ್ಯ ಅತಿಥಿüಯಾಗಿ ಭವಾನಿ ಫೌಂಡೇಶನ್ ಮುಂಬಯಿ ಇದರ ಸಂಸ್ಥಾಪಕ ಅಧ್ಯಕ್ಷÀ ದಡ್ದಂಗಡಿ ಚೆಲ್ಲಡ್ಕ ಕುಸುಮೋದರ ದೇರಣ್ಣ ಶೆಟ್ಟಿ (ಕೆ.ಡಿ ಶೆಟ್ಟಿ) ಮತ್ತು ಗೌರವ ಅತಿಥಿüಗಳಾಗಿ ಸೋಮಕ್ಷತ್ರೀಯ ಗಾಣಿಗ ಸಮಾಜ ಬಾರ್ಕೂರು ಅಧ್ಯಕ್ಷ ಕೆ.ಗೋಪಾಲ್, ಶ್ರೀ ವೇಣುಗೋಪಾಲ ಕೃಷ್ಣ ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ನಿಯಮಿತ ಬೆಂಗಳೂರು ಇದರ ಕಾರ್ಯಾಧ್ಯಕ್ಷ ಎಂ.ಗೋಪಾಲಕೃಷ್ಣ, ಸೋಮಕ್ಷತ್ರೀಯ ಗಾಣಿಗ ಸಮಾಜ ಬೆಂಗಳೂರು ಅಧ್ಯಕ್ಷ ಹೆಚ್.ಟಿ ನರಸಿಂಹ, ಗಾಣಿಗ ಸೇವಾ ಸಮಾಜ ಕುಂದಾಪುರ ಇದರ ಅಧ್ಯಕ್ಷ ಕೊಗ್ಗ ಗಾಣಿಗ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ವಿದ್ಯೋದಯ ಸಮಿತಿ ಕಾರ್ಯಾಧಕ್ಷ ವಿಜಯೇಂದ್ರ ಗಾಣಿಗ ತಿಳಿಸಿದ್ದಾರೆ.
ಸಮಾರಂಭದಲ್ಲಿ ಬೃಹನ್ಮುಂಬಯಿ ಮಹಾನಗರ ಪಾಲಿಕೆಯ ಉಪ ಶಿಕ್ಷಣಾಧಿಕಾರಿ ಮಮತಾ ಡಿ.ರಾವ್ ಮತ್ತು ಸಂಪರ್ಕ ಸುಧಾ ಮಾಸಿಕದ ಮಾಜಿ ಸಂಪಾದಕ ರಘುರಾಮ ಬೈಕಾಡಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಂತೆಯೇ ಗಾಣಿಗ ಸಮಾಜದ ವಿದ್ಯೋದಯ ಸಮಿತಿ ವತಿಯಿಂದ ವಾರ್ಷಿಕವಾಗಿ ಪ್ರದಾನಿಸಲಾಗುವ ಶೈಕ್ಷಣಿಕ ಪುರಸ್ಕಾರ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸÀಲಾಗುವುದು ಎಂದು ಮಹಿಳಾ ವಿಭಾಗಧ್ಯಕ್ಷೆ ತಾರಾ ಎನ್.ಭಟ್ಕಳ್ ಮತ್ತು ಯುವ ವಿಭಾಗದ ಕಾರ್ಯಾಧ್ಯಕ್ಷ ಗಣೇಶ್ ಆರ್.ಕುತ್ಪಾಡಿ ತಿಳಿಸಿದ್ದಾರೆ.
ದಿನಪೂರ್ತಿಯಾಗಿಸಿ ಆಚರಿಸಲ್ಪಡುವ ಸಂಭ್ರಮದಲ್ಲಿ ಗಾಣಿಗ ಬಾಂಧವರು ಮತ್ತು ಮಕ್ಕಳು ವಿವಿಧ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಸಂಸ್ಥೆಯ ಗೌರವಾಧ್ಯಕ್ಷ ಜಗನ್ನಾಥ ಎಂ.ಗಾಣಿಗ ಮತ್ತು ಕೋಶಾಧಿಕಾರಿ ಜಯಂತ್ ಪಿ.ಗಾಣಿಗ ತಿಳಿಸಿದ್ದಾರೆ.
ವಾರ್ಷಿಕೋತ್ಸವದಲ್ಲಿ ಗಾಣಿಗ ಸಮಾಜದ ಸರ್ವ ಬಂಧುಗಳು ಪರಿವಾರ ಸಹಿತ ಪಾಲ್ಗೊಂಡು ಯಶಸ್ಸಿಗೆ ಸಹಕರಿಸುವಂತೆ ಆಡಳಿತ ಮಂಡಳಿ ಪರವಾಗಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರ್.ಗಾಣಿಗ ಈ ಮೂಲಕ ವಿನಂತಿಸಿದ್ದಾರೆ.