ಪಾಜಕ ಆನಂದತೀರ್ಥ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನಡೆಯಿತು . ಕ್ರೀಡಾಕೂಟವನ್ನು ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ವಿಶ್ವನಾಥ್ ಬಾಯರಿ ಉದ್ಘಾಟಿಸಿದರು. ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ , ಕ್ರೀಡೆ ಪ್ರತಿಯೊಬ್ಬ ಮನುಷ್ಯನ ಅವಿಭಾಜ್ಯ ಅಂಗ, ವಿದ್ಯಾರ್ಥಿದೆಸೆಯಿಂದಲೇ ಕ್ರೀಡೆಯನ್ನು ಮೈಗೂಡಿಸಿಕೊಂಡರೆ ಸರ್ವತೋಮುಖ ಬೆಳವಣಿಗೆ ಸಾಧ್ಯ. ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಹೆಸರು ಗಳಿಸುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ನಾಗರಾಜ್ ಬಲ್ಲಾಳ್ , ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸದಸ್ಯರಾದ ಸುದರ್ಶನ ರಾವ್, ರೂಪಾ ಬಲ್ಲಾಳ್ , ಪ್ರಾಂಶುಪಾಲೆ ಗೀತಾ ಎಸ್. ಕೋಟ್ಯಾನ್ , ಆಡಳಿತಾಧಿಕಾರಿ ಗುರುದತ್ ಸೋಮಯಾಜಿ , ಪಡುಬೆಳ್ಳೆ ಹಾಲು ಉತ್ಪಾದಕರ ಸ . ಸಂ. ಅಧ್ಯಕ್ಷ ಮೋಹನ ರಾವ್ ಉಪಸ್ಥಿತರಿದ್ದರು . ಗುರುದತ್ ಸೋಮಯಾಜಿ ಅತಿಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ವಿನುತಾ ಕಾರ್ಯಕ್ರಮ ನಿರೂಪಿಸಿ , ದೈಹಿಕ ಶಿಕ್ಷಣ ಶಿಕ್ಷಕರಾದ ಸುಮನಾ ಸ್ವಾಗತಿಸಿ ಸಂತೋಷ್ ಶೆಟ್ಟಿ ವಂದಿಸಿದರು .