ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ 12ನೇ ಪ್ರತಿಷ್ಠಾ ವರ್ಧಂತ್ಯುತ್ಸವ
ಮುಂಬಯಿ, ಎ.03: ಉಪನಗರ ಮಲಾಡ್ ಪೂರ್ವದ ತಾನಾಜಿ ನಗರದ ಕುರಾರ್ ವಿಲೇಜ್ನಲ್ಲಿನ ಶ್ರೀ ದುರ್ಗಾ ಪರಮೇಶ್ವರಿ ಸಮಿತಿ (ರಿ.) ಸಂಚಾಲಕತ್ವದ ಶ್ರೀ ದುರ್ಗಾ ಪರಮೇಶ್ವರಿ ಮಂದಿರದಲ್ಲಿ ಸ್ವಸ್ತಿ ಶ್ರೀ ವಿಕಾರಿ ನಾಮ ಸಂ|ರದ ಮೇಷ ಮಾಸ ದಿನ 6 ಸಲುವ ಚೈತ್ರ ಬಹುಳ ಪ್ರತಿಪತ್ ದಿನಾಂಕ 20.04.2019ನೇ ಶನಿವಾರ ಮೊದಲ್ಗೊಂಡು ದಿನಾಂಕ 22.04.2019ನೇ ಸೋಮವಾರ ತನಕ ಶ್ರೀ ದೇವಿ ಸನ್ನಿಧಿಯಲ್ಲಿ 12ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಜರಗಲಿದೆ.
ಆ ಪ್ರಯುಕ್ತ ಶ್ರೀ ಶಂಕರನಾರಾಯಣ ತಂತ್ರಿ ಡೊಂಬಿವಲಿ ಇವರ ನೇತೃತ್ವದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಸೂಡ ಶ್ರೀ ರಾಘವೇಂದ್ರ ಭಟ್ ಅವರ ಪೌರೋಹಿತ್ಯದಲ್ಲಿ ಎ.20ನೇ ಶನಿವಾರ ಸಂಜೆ ಗಂಟೆ 5.00ರಿಂದ ಸಾಮೂಹಿಕ ಪ್ರಾರ್ಥನೆ, ಸ್ವಸ್ಥಿ ಪುಣ್ಯಾಹ ವಾಚನ, ತೋರಣ ಮುಹೂರ್ತ, ಋತಿಗ್ವರಣೆ, ವಾಸ್ತು ಪೂಜಾ, ವಾಸ್ತು ಬಲಿ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ದಿಕ್ಪಾಲ ಬಲಿ ನಡೆಯಲಿದೆ.
ಎ.20ನೇ ರವಿವಾರ ಬೆಳಿಗ್ಗೆ ಗಂಟೆ 8.00ರಿಂದ ಮಹಾಗಣಪತಿ ಹೋಮ, ಶ್ರೀ ದೇವಿ ಸನ್ನಿಧಿಯಲ್ಲಿ 25 ಕಲಶಾರಾಧನೆ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ. ಹಾಗೂ ಮಧ್ಯಾಹ್ನ 1.00ರಿಂದ 3.00ರ ತನಕ ಅನ್ನ ಸಂತರ್ಪಣೆ. ಸಂಜೆ ಗಂಟೆ 5.00ರಿಂದ ಶ್ರೀ ದೇವೀ ಸನ್ನಿಧಿಯಲ್ಲಿ ಲಲಿತ ಸಹಸ್ರ ನಾಮಾರ್ಚನೆ, ಕುಂಕುಮಾರ್ಚನೆ, ಮಹಾಪೂಜೆ, ರಂಗಪೂಜೆ, ಉತ್ಸವ ಬಲಿ, ಕಟ್ಟೆ ಪೂಜೆ, ಅನುಗ್ರಹ ಪ್ರಾರ್ಥನೆ, ಪ್ರಸಾದ ವಿತರಣೆ ನಡೆಯಲಿದೆ.
ಎ.20ನೇ ಸೋಮವಾರ ಬೆಳಿಗ್ಗೆ ಗಂಟೆ 9.00ರಿಂದ ಮಹಾಗಣಪತಿ ಹೋಮ, ನವಕ ಕಲಶ ಪ್ರಧಾನ, ಕಲಶಾರಾಧನೆ, ಪ್ರಧಾನ ಹೋಮ, ಕಲಶಾಭಿಷೇಕ, ಮಹಾಮಂತ್ರಾಕ್ಷತೆ, ಋತ್ವಿಕ್ ಸಂಭವನೆ, ಪ್ರಸಾದ ವಿತರಣೆ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ.
ಆ ಪ್ರಯುಕ್ತ ಮಹಾನಗರದಲ್ಲಿನ ಸಮಸ್ತ ಸದ್ಭಕ್ತ ಬಾಂಧವರು ಬಂಧು-ಬಾಂಧವರನ್ನು ಒಳಗೊಂಡು ಚಿತ್ತೈಸಿ, ತನು-ಮನ-ಧನಗಳ ಸಹಕಾರವಿತ್ತು, ಕಾರ್ಯಕ್ರಮವನ್ನು ಚಂದಗಾಣಿಸಿ ತೀರ್ಥ-ಪ್ರಸಾದ ಸ್ವೀಕರಿಸಿ, ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ದುರ್ಗಾಪರಮೇಶ್ವರಿ ಸಮಿತಿ ಅಧ್ಯಕ್ಷÀ ರಘುನಾಥ ಕೊಟ್ಟಾರಿ, ಉಪಾಧ್ಯಕ್ಷ ಪದ್ಮನಾಭ ಟಿ.ಶೆಟ್ಟಿ, ಗೌ| ಪ್ರ| ಕಾರ್ಯದರ್ಶಿ ಎಸ್.ಬಿ ಕೋಟ್ಯಾನ್, ಕೋಶಾಧಿಕಾರಿ ಬಾಬು ಎಂ.ಸುವರ್ಣ ಮತ್ತು ಸರ್ವ ಪದಾಧಿಕಾರಿಗಳು ಈ ಮೂಲಕ ವಿನಂತಿಸಿದ್ದಾರೆ.