Thursday 25th, April 2024
canara news

ವಿ.ಆರ್ ಕೋಟ್ಯಾನ್‍ರ ಮಾತೃಶ್ರೀ ಸುಂದರಿ ಆರ್.ಬಂಗೇರ ನಿಧನ

Published On : 15 Apr 2019   |  Reported By : Rons Bantwal


ಮುಂಬಯಿ, ಎ.15: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಧುರೀಣ, ಹೆಜಮಾಡಿ ಬಿಲ್ಲವರ ಸಂಘದ ಅಭಿವೃದ್ಧಿಯ ರೂವಾರಿ, ಭಾರತ್ ಬ್ಯಾಂಕ್‍ನ ಮಾಜಿ ಕಾರ್ಯಧ್ಯಕ್ಷ ವಾಸುದೇವ ಆರ್.ಕೋಟ್ಯಾನ್ ಇವರ ಮಾತೃಶ್ರೀ ಸುಂದರಿ ರಾಜು ಬಂಗೇರ (89.) ಇಂದಿಲ್ಲಿ ಸೋಮವಾರ ಮುಂಜಾನೆ ಮಹಾನಗರದ ವಿಲೇಪಾರ್ಲೆ ಪಶ್ಚಿಮದಲ್ಲಿನ ನಾನಾವಟಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಇನ್ನಬೈಲು ಮನೆತನದವರಾಗಿದ್ದ ಮೃತರು ಮೂರು ಗಂಡು, ಮೂರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಸುಂದರಿ ಕೋಟ್ಯಾನ್ ನಿಧನಕ್ಕೆ ಭಾರತ್ ಬ್ಯಾಂಕ್‍ನ ಕಾರ್ಯಧ್ಯಕ್ಷ ಜಯ ಸಿ.ಸುವರ್ಣ, ಉಪ ಕಾರ್ಯಾಧ್ಯಕ್ಷೆ ನ್ಯಾ| ರೋಹಿಣಿ ಜೆ.ಸಾಲ್ಯಾನ್, ಆಡಳಿತ ನಿರ್ದೇಶಕ ಸಿ.ಆರ್ ಮೂಲ್ಕಿ ಮತ್ತು ನಿರ್ದೇಶಕರು, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್.ಪೂಜಾರಿ, ಗೌ| ಪ್ರ| ಕಾರ್ಯದರ್ಶಿ ಧನಂಜಯ ಶಾಂತಿ, ಮಾಜಿ ಅಧ್ಯಕ್ಷರುಗಳಾದ ಎಲ್.ವಿ ಅವಿೂನ್, ನಿತ್ಯಾನಂದ ಡಿ.ಕೋಟ್ಯಾನ್ ಸೇರಿದಂತೆ ಸರ್ವ ಪದಾಧಿಕಾರಿಗಳು, ಹೆಜಮಾಡಿ ಬಿಲ್ಲವರ ಸಂಘದ ಸರ್ವ ಪದಾಧಿಕಾರಿಗಳು, ಹಿರಿಯ ಉದ್ಯಮಿಗಳಾದ ಬೋಳ ರಘುರಾಮ ಕೆ.ಶೆಟ್ಟಿ, ಜಗನ್ನಾಥ ವಿ.ಕೋಟ್ಯಾನ್, ಲೆಕ್ಕ ಪರಿಶೋಧಕ ಸಿಎ| ಅಶ್ವಜಿತ್ ಹೆಜ್ಮಾಡಿ, ಶ್ರೀ ವಿಠೋಭ ಭಜನಾ ಮಂದಿರ ಹೆಜಮಾಡಿ ಕೋಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೋಹನ್‍ದಾಸ್ ಹೆಜ್ಮಾಡಿ, ಹರೀಶ್ ಹೆಜ್ಮಾಡಿ ಮತ್ತಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here