ಉಜಿರೆ: ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ವಿದ್ಯಾರ್ಥಿಗಳು ಕೃಷಿ ಕಾಯಕದಲ್ಲಿ ತೊಡಗಿ ಖುಷಿ ಪಡೆದರು.
ತುಳು ಹಾಡುಗಳು, ಕೋಲಾಟ, ಜಾನಪದ ಹಾಡುಗಳು, ಕೆಸರು ಗದ್ದೆಯಲ್ಲಿ ಮಕ್ಕಳ ಆಟ-ಓಟ ಇತ್ಯಾದಿ ಕೃಷಿ ಚಟುವಟಿಕೆಗಳಿಂದ ವಿದ್ಯಾರ್ಥಿಗಳು ಸಂತೋಷ, ಸಂಭ್ರಮ ಅನುಭವಿಸಿದರು.
ಪಾಠದ ಕಾಟವಿಲ್ಲ. ವಿದ್ಯಾರ್ಥಿಗಳು ಹಾಡಿ ಕುಣಿದರು. ಕುಣಿದು ಹಾಡಿದರು. ನೇಜಿ ನೆಟ್ಟರು. ಸಂದಿ-ಪಾಡ್ದನ ಹಾಡಿದರು.
ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸುಪ್ರಿಯಾ ಹಷೇಂದ್ರ ಕುಮಾರ್ ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಅಭಿನಂದಿಸಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ, ಎಂ.ವಿ. ನೇತೃತ್ವದಲ್ಲಿ ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಸಹಕರಿಸಿದರು.