Friday 19th, April 2024
canara news

ಬಿಲ್ಲವರ ಎಸೋಸಿಯೇಶನ್ ಸಿಬ್ಬಂದಿ ಕೃಷ್ಣ ಬಂಗೇರ ನಿವೃತ್ತಿ

Published On : 24 Aug 2019   |  Reported By : Rons Bantwal


ಮುಂಬಯಿ, ಅ.22: ಬಿಲ್ಲವರ ಎಸೋಸಿಯೇಶನ್ ಮುಂಬಯಿ ಇದರ ಸಿಬ್ಬಂದಿ ಶ್ರೀ ಕೃಷ್ಣ ಬಂಗೇರ ರವರು ತಮ್ಮ ಸುದೀರ್ಘ ಸೇವೆಯಿಂದ ನಿವೃತ್ತಿ ಹೊಂದಿದರು. ಅವರನ್ನು ಗೌರವಿಸುವ ಕಾರ್ಯಕ್ರಮವು ಎಸೋಸಿಯೇಶನಿನ ಕೇಂದ್ರ ಕಛೇರಿ ಬಿಲ್ಲವ ಭವನದಲ್ಲಿ ತಾರೀಕು. 22.07.2019 ರಂದು ಭವನದ ಕಿರು ಸಭಾಗೃಹದಲ್ಲಿ ಜರಗಿತು.

ಕೃಷ್ಣ ಬಂಗೇರರವರ ಪ್ರಾಮಾಣಿಕ ಸೇವೆಯನ್ನು ಅಧ್ಯಕ್ಷರಾದ ಚಂದ್ರಶೇಖರ ಪೂಜಾರಿಯವರು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ತಮ್ಮ ಕಾರ್ಯ ಚಟುವಟಿಕೆಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರರಾದ ಬಂಗೇರರವರನ್ನು ಶಾಲು, ಪುಷ್ಪಗೌರವ ಹಾಗೂ ನೆನಪಿನ ಕಾಣಿಕೆಯೊಂದಿಗೆ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಸೋಸಿಯೇಶನಿನ ಕಾರ್ಯಕಾರಿ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಅವರಿಗೆ ಶುಭ ಹಾರೈಸಿದರು. ಗೌ.ಪ್ರ. ಕಾರ್ಯದರ್ಶಿ ಧನಂಜಯ ಶಾಂತಿ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆಗೈದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here