ಮುಂಬಯಿ, ಆ.25: ದಿ. ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಕಳೆದ ಬುಧವಾರ ಗುರುವಾರ ಗೋರೆಗಾಂವ್ ಪಶ್ಚಿಮದಲ್ಲಿನ ಕೇಂದ್ರ ಕÀಚೇರಿ 41ನೇ ಸಂಸ್ಥಾಪನಾ ದಿನಾಚರಣೆಯನ್ನು ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ ಅವರು ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕ್ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮತ್ತು ಆಡಳಿತ ನಿರ್ದೇಶಕ ಸಿ.ಆರ್ ಮೂಲ್ಕಿ, ಬ್ಯಾಂಕ್ನ ಪ್ರಧಾನ ಪ್ರಬಂಧಕರಾದ ವಿದ್ಯಾನಂದ ಎಸ್.ಕರ್ಕೇರಾ, ದಿನೇಶ್ ಬಿ.ಸಾಲ್ಯಾನ್, ನಿತ್ಯಾನಂದ ಎಸ್.ಕಿರೋಡಿಯನ್, ಬ್ಯಾಂಕ್ ಉಪ ಪ್ರಧಾನ ಪ್ರಬಂಧಕರು, ಸಹ ಪ್ರಧಾನ ಪ್ರಬಂಧಕರು, ಭಾರತ್ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಶನ್ನ ಅಧ್ಯಕ್ಷ ದಿನೇಶ್ ಎ.ಪೂಜಾರಿ, ಭಾರತ್ ಬ್ಯಾಂಕ್ ಸ್ಟಾಫ್ ವೆಲ್ಫೇರ್ ಕ್ಲಬ್ನ ಕಾರ್ಯದರ್ಶಿ ಮೋಕ್ಷ ಕುಂದರ್, ಕೋಶಾಧಿಕಾರಿ ರೇವತಿ ಪೂಜಾರಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.