ಮುಂಬಯಿ, ಅ.10: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ, ಬಿ. ಎಸ್.ಕೆ.ಬಿ. ಎಸೋಸಿಯೇಶನ್ ನ ಸಹಯೋಗದೊಂದಿಗೆ ಶರನ್ನವರಾತ್ರಿಯ ಪರ್ವಕಾಲದ ಸೋಮವಾರ ಮಹಾನವಮಿ ದಿನ ದೀಪಾರಾಧನೆಯನ್ನು ಆಶ್ರಯದ ಎ.ಕೆ. ಹೆಬ್ಬಾರ್ ಸಭಾಗೃಹದಲ್ಲಿ ಸಂಭ್ರಮ-ಶ್ರದ್ಧಾಭಕ್ತಿಯಿಂದ ಆಚರಿಸಿತು.
ಪ್ರಧಾನ ಪುರೋಹಿತ, ವೇದಮೂರ್ತಿ ಶ್ರೀ ಕೃಷ್ಣರಾಜ ಉಪಾಧ್ಯಾಯ ತನ್ನ ಪೌರೋಹಿತ್ಯದಲ್ಲಿ ಸಹ ಸಹ ಪುರೋಹಿತರಾದ ಶ್ರೀಶ ಉಡುಪ, ರಾಘವೇಂದ್ರ ಭಟ್, ಶ್ರೀನಿವಾಸ್ ಕುಂಜಾರು, ನಾಗರಾಜ್ ಐತಾಳ್, ಮತ್ತು ಬಾಲಕೃಷ್ಣ ಉಡುಪ ಅವರ ಸಹಕಾರದೊಂದಿಗೆ ಬೃಹತ್ ಮಂಡಲ ರಚಿಸಿ, ಮಂಡಲ ಮಧ್ಯದಲ್ಲಿ ಶ್ರೀದೇವಿಯನ್ನು ಪ್ರತಿಷ್ಠಾಪಿಸಿ, ಸಪ್ತಶತಿ ಪಾರಾಯಣ, ಭುವನೇಶ್ವರಿ ಪೂಜೆ ಇತ್ಯಾದಿಗಳೊಂದಿಗೆ ವಿಧಿವತ್ತಾಗಿ ನೆರವೇರಿಸಿದರು. ಅಶೋಕ್ ಮೇಲ್ಮನೆ ಮತ್ತು ಚಿತ್ರಾ ಮೇಲ್ಮನೆ ದಂಪತಿ ಪೂಜಾಧಿಗಳ ಯಜಮಾನ ಸ್ಥಾ£ ವಹಿಸಿದ್ದರು.
ಶ್ರೀದೇವಿಗೆ ಮಹಾ ಮಂಗಳಾರತಿ ನೆರವೇರಿಸಿದ ನಂತರ ಶ್ರೀ ಬದ್ರಿನಾರಾಯಣ ಪಿಲಿಂಜೆ ಪರಿವಾರದ ಪ್ರಾಯೋಜಕತ್ವದಲ್ಲಿ ಕನ್ನಿಕೆ ಮತ್ತು ಸುವಾಸಿನಿ ಪೂಜೆ ನೆರವೇರಿತು. ಕುಮಾರಿ ತೃಷಾ ಭಟ್ ಹಾಗೂ ಮಹಾಕಾಳಿ, ಮಹಾಲಕ್ಷಿ ್ಮೀ, ಮಹಾ ಸರಸ್ವತಿಯ ಸ್ತಾನವನ್ನು ವಿಜಯಾ ರಾವ್, ಉಷಾ ಭಟ್ ಮತ್ತು ನಾಗರತ್ನ ಹೊಳ್ಳ ಅವರು ಕನ್ನಿಕಾ ಸ್ಥಾನ ಅಲಂಕರಿಸಿದ್ದರು.
ನವರಾತ್ರಿಯ ಪರ್ವ ಕಾಲದಲ್ಲಿ ಮಾತೃ ಸ್ವರೂಪಿಣಿ ಶ್ರೀ ದುರ್ಗಾ ದೇವಿಯನ್ನು ನಾವೆಲ್ಲಾ ಭಕ್ತಿ ಶ್ರದ್ಧಾ ಪೂರ್ವಕವಾಗಿ ಆರಾಧಿಸಿದ್ದೇವೆ. ಶ್ರೀದೇವಿಯು ಭಕ್ತಾದಿಗಳ ಮನೋಭಿಲಾಷೆಗಳನ್ನು ಈಡೇರಿಸಿ, ಸಂಘವು ಸಂಕಲ್ಪಿಸಿಕೊಂಡ ಗೋಕುಲ ಪುನರ್ ನಿರ್ಮಾಣ ಕಾರ್ಯವು ಶೀಘ್ರವಾಗಿ ಪೂರ್ಣಗೊಂಡು ಭವ್ಯವಾದ ಮಂದಿರದಲ್ಲಿ ಶ್ರೀ ಕೃಷ್ಣನ ಪುನರ್ ಪ್ರತಿಷ್ಠೆಯಾಗುವಂತೆ ಅನುಗ್ರಹಿಸಲಿ ಎಂದು ವೇ| ಮೂ| ಕೃಷ್ಣರಾಜರು
ಪ್ರಾಥಿರ್üಸಿದರು.
ಇದೇ ಸಂದರ್ಭದಲ್ಲಿ, ಸರಸ್ವತಿ ಪೂಜೆಯ ಅಂಗವಾಗಿ, ಶಾರದಾ ಮಾತೆಯ ಭಾವಚಿತ್ರ ಹಾಗೂ ಧಾರ್ಮಿಕ ಗ್ರಂಥಗಳನ್ನು ಇರಿಸಿ, ಗೋಕುಲ ಭಜನಾ ಮಂಡಳಿ, ಶ್ರೀಕೃಷ್ಣ ಭಜನಾ ಮಂಡಳಿ ಹಾಗೂ ಹರಿಕೃಷ್ಣ ಭಜನಾ ಮಂಡಳಿಯಿಂದ ದೇವಿ ಭಜನೆ, ಸ್ತೋತ್ರ ಪಠನೆ ಇತ್ಯಾದಿ ನೆರವೇರಿತು. ಬಾಲಕೃಷ್ಣ ಉಡುಪ ಇವರು ಶ್ರೀ ಶಾರದಾ ದೇವಿಗೆ ಮಂಗಳಾರತಿ ಗೈದು, ತೀರ್ಥ ಪ್ರಸಾದ ವಿತರಿಸಿದರು. ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ವಿಶ್ವಸ್ಥ ಮಂಡಳಿ ಹಾಗೂ ಬಿಎಸ್ಕೆಬಿ ಅಸೋಸಿಯೇಶನ್ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ, ಸದಸ್ಯರುಗಳ ಸಹಿತ ನೂರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಸೇವಾಥಿರ್üಗಳಿಗೆ ಹಾಗೂ ನೆರೆದ ಭಕ್ತಾದಿಗಳಿಗೆ ತೀರ್ಥ ಪ್ರಸಾದ ನೀಡಿ ಅನುಗ್ರಹಿಸಲಾಗಿದ್ದು, ಅನ್ನ ಸಂತರ್ಪಣೆಯೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.