(ಚಿತ್ರ / ವರದಿ : ರೊನಿಡಾ ಮುಂಬಯಿ)
ಮುಂಬಯಿ, ಅ.25: ಮಹಾರಾಷ್ಟ್ರ ರಾಜ್ಯದ 2019ರ ವಿಧಾನಸಭಾ ಚುನಾವಣೆಯಲ್ಲಿ ಬೋರಿವಿಲಿ ವಿಧಾನ ಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾದ ಸುನೀಲ್ ರಾಣೆ ಅವರು ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ (ಬೋರಿವಿಲಿ) ಸಂಸದ ಗೋಪಾಲ್ ಸಿ.ಶೆಟ್ಟಿ ಅವರನ್ನು ಸಂಸದರ ಕಚೇರಿಯಲ್ಲಿ ಭೇಟಿ ನೀಡಿದರು. ಎಂಪಿ ಗೋಪಾಲ್ ಶೆಟ್ಟಿ ಅವರು ಮತ್ತೆ ಶಾಸಕರಾಗಿ ಆಯ್ಕೆಯಾದ ಸುನೀಲ್ ರಾಣೆ ಅವರನ್ನು ಪುಷ್ಫಗುಪ್ಛವನ್ನಿತ್ತು ಶುಭಾರೈಸಿದರು.
ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ, ಗೌ| ಪ್ರ| ಕಾರ್ಯದರ್ಶಿ ಸಿಎ| ಸಂಜೀವ ಶೆಟ್ಟಿ, ಮಹಾನಗರದಲ್ಲಿನ ಹೆಸರಾಂತ ಸಂಘಟಕ, ಸಂಯೋಜಕ ಎರ್ಮಾಳ್ ಹರೀಶ್ ಶೆಟ್ಟಿ, ಮುಂಡಪ್ಪ ಎಸ್.ಪಯ್ಯಡೆ ಮತ್ತಿತರರು ಉಪಸ್ಥಿತರಿದ್ದು ಸುನೀಲ್ ರಾಣೆ ಅವರನ್ನು ಅಭಿನಂದಿಸಿದರು.