Tuesday 23rd, April 2024
canara news

“ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ವಿಧ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ”

Published On : 12 Jan 2020   |  Reported By : Rons Bantwal


ಪೆನ್ವಿಲೈೀನಿಯಾ ವಿಶ್ವವಿಧ್ಯಾಲಯ ವಿಧ್ಯಾರ್ಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಕ್ಷೇತ್ರದಿಂದ ನಡೆಸುತ್ತಿರುವ ಕಾರ್ಯಕ್ರಮಗಳ ಕುರಿತು ಅಧ್ಯಯನ ನಡಸಿದರು. ಈ ಸಂಧರ್ಭದಲ್ಲಿ ವಿಧ್ಯಾರ್ಥಿಗಳ ಜೊತೆ ಮಾತನಾಡುತ್ತಾ “ಸಮಾಜದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಹಳ ಅವಕಾಶಗಳಿವೆ. ಧಾರ್ಮಿಕ ಸಂಸ್ಥೆಗಳು ಧರ್ಮಸಂರಕ್ಷಣೆಯ ಜೊತೆಗೆ ಪ್ರಸಕ್ತ ಸಮಾಜದಲ್ಲಿ ಇರುವ ಸವಾಲುಗಳನ್ನು ಗುರುತಿಸಿ ಸ್ಪಂದಿಸಿದರೆ ಉತ್ತಮವಾಗುವುದು. ಶ್ರೀ ಕ್ಷೇತ್ರ ಧರ್ಮಸ್ಥಳ ಬಹಳ ವರ್ಷಗಳಿಂದ ಈ ನಿಟ್ಟಿನಲ್ಲಿ ಕರ್ತವ್ಯನಿರ್ವಹಿಸುತ್ತಿದೆ. ಪರಂಪರಾಗತವಾಗಿ ಬಂದಿರುವ ಈ ಕೈಂಕರ್ಯ ಸಮಾಜ ಸೇವೆಯನ್ನು ಮಾಡುವ ವಿಫುಲ ಅವಕಾಶವನ್ನು ನಮಗೆ ಒದಗಿಸಿದೆ. ಯೋಜನೆಗಳನ್ನು ಅನುಷ್ಠಾನಿಸುತ್ತಾ ಬಂದಂತೆ ಹೊಸ ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಯಿತು. ಅಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ಮಾಡುವುದು ಬಹಳ ಸಂತೋಷದಾಯಕ ಹಾಗೂ ಸವಾಲುಗಳು ಸಾಮಾನ್ಯ. ಎಂದಿಗೂ ಸವಾಲುಗಳನ್ನು ಎದುರಿಸಿ ಮುನ್ನಡೆದರೆ ಯಶಸ್ಸು ಸಾಧ್ಯ.” ಎಂದು ಡಾ. ಡಿ. ವಿರೇಂದ್ರ ಹೆಗ್ಗಡೆಯವರು ಅಭಿಪ್ರಾಯಪಟ್ಟರು. ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯನ್ನು “ನಾಲೆಡ್ಜ್ ಪಾರ್ಟ್‍ನರ್” ಆಗಿ ಗುರುತಿಸಿದ ಕುರಿತು ಪ್ರಮಾಣ ಪತ್ರವನ್ನು ಹಾಗೂ ಫಲಕವನ್ನು ನೀಡಿ ಡಾ. ಡಿ. ವಿರೇಂದ್ರ ಹೆಗ್ಗಡೆಯವರನ್ನು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪರವಾಗಿ ಪ್ರೊ. ಫೆಮಿಡಾರವರು ಗೌರವಿಸಿದರು.

ಭೇಟಿಯ ಸಂಧರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಎಲ್. ಹೆಚ್. ಮಂಜುನಾಥ್ ರವರು ಗ್ರಾಮೀಣಾಭಿವೃದ್ಧಿ ಯೋಜನೆಯ ಕುರಿತು ವಿವರಿಸಿದರು. ಸಿರಿಗ್ರಾಮೊದ್ಯೋಗ ಸಂಸ್ಥೆಗೆ ಭೇಟಿ ನೀಡಲಾಯಿತು. ಕ್ಷೇತ್ರದ ವಿವಿಧ ವಿಭಾಗಗಳನ್ನು ಭೇಟಿ ಮಾಡಲಾಯಿತು. ತಂಡದಲ್ಲಿ ಪ್ರೊ. ಫೆಮಿಡಾ, ಶ್ರೀ ವಿನೋದ್ ದೀಕ್ಷೀತ್ ಇವರು ತಂಡವನ್ನು ಪ್ರತಿನಿಧಿಸಿದರು. ಶ್ರೀಮತಿ ಮಮತಾ ಹರೀಶ್ ರಾವ್ ನಿರ್ದೇಶಕಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಶ್ರೀಮತಿ ಚೈತನ್ಯಾ, ಉಪನ್ಯಾಸಕಿ ಇವರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here