ಶುಭೇಚ್ಛ ಕೋರಿದ ಭಾರತ್ ಬ್ಯಾಂಕ್ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ
ಮುಂಬಯಿ, ಜ.22: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸಮರ್ಥ ನಾಯಕರೂ, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಗೌರವಾಧ್ಯಕ್ಷ ಮತ್ತು ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷರಾದ ಜಯ ಸಿ.ಸುವರ್ಣ ಅವರು ಇಂದಿಲ್ಲಿ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸಚಿವ ಸಂಪುಟದ ಹಾಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಛಗ್ನ್ ಭುಜಬಲ್ ಅವರನ್ನು ಸಚಿವರ ಕಛೇರಿಯಲ್ಲಿ ಭೇಟಿ ನೀಡಿ ಪುಷ್ಫಗುಪ್ಚವನ್ನಿತ್ತು ಅಭಿನಂದಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ಡಾ| ರಾಜಶೇಖರ್ ಆರ್.ಕೋಟ್ಯಾನ್, ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ನ ನಿರ್ದೇಶಕ ಭಾಸ್ಕರ್ ಎಂ.ಸಾಲ್ಯಾನ್, ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷ (ಎನ್ಸಿಪಿ) ಉತ್ತರ ಮಧ್ಯ ಜಿಲ್ಲಾ ನಿರೀಕ್ಷಕ ಲಕ್ಷ ್ಮಣ ಸಿ.ಪೂಜಾರಿ ಚಿತ್ರಾಪು, ಲೀಲಾಧರ್ ಸುವರ್ಣ ಉಪಸ್ಥಿತರಿದ್ದರು.