Saturday 10th, May 2025
canara news

2020 ಸಾಲಿನ `ಚಕ್ರಧಾರಿ' ಪ್ರಶಸ್ತಿಗೆ ಡಾ| ಸುನೀತಾ ಎಂ.ಶೆಟ್ಟಿ ಆಯ್ಕೆ

Published On : 03 Feb 2020   |  Reported By : Rons Bantwal


ಮುಂಬಯಿ, ಜ.28: ಮಯೂರವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಕೊಡಮಾಡುವ (2019-2020) ವಾರ್ಷಿಕ `ಚಕ್ರಧಾರಿ ಪ್ರಶಸ್ತಿ'ಗೆ ನಾಡಿನ ಹಿರಿಯ ಲೇಖಕಿ, ಕವಯತ್ರಿ, ಸಂಘಟಕಿ, ನಿವೃತ್ತ ಪ್ರಾಧ್ಯಾಪಕಿ, ಮುಂಬಯಿ ಕನ್ನಡಿಗರ ಒಲುಮೆಯ ಸುನೀತಕ್ಕ ಎಂದೇ ಪರಿಚಿತ ಡಾ| ಸುನೀತಾ ಎಂ.ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

ಪದ್ಮನಾಭ ಸಪಲಿಗ, ಬಿ.ಬಿ ರಾವ್, ಎಸ್.ಕೆ ಸುಂದರ್ ಅವರನ್ನೊಳಗೊಂಡ ಆಯ್ಕೆ ಸಮಿತಿಯು 2019-2020ರ `ಚಕ್ರಧಾರಿ ಪ್ರಶಸ್ತಿ'ಗೆ ಡಾ| ಸುನೀತಾ ಎಂ.ಶೆಟ್ಟಿ ಅವÀರನ್ನು ಆಯ್ಕೆಗೊಳಿಸಿದೆ. 2010ರಿಂದ ಮುಂಬಯಿಯಲ್ಲಿ ನಾಡು, ನುಡಿಗೆ ತನ್ನದೇ ಆದ ಅಳಿಲು ಸೇವೆ ಸಲ್ಲಿಸುತ್ತಿರುವ ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನ ಪ್ರತೀವರ್ಷ ಸಮಾಜ ಸೇವಾ ನಿರತ ಸಂಸ್ಥೆ ಯಾ ವ್ಯಕ್ತಿಗೆ ನಗದು ಸಹಿತ `ಚಕ್ರಧಾರಿ' ಪ್ರಶಸ್ತಿ ನೀಡುತ್ತಾ ಬಂದಿದೆ. ದಿನಾಂಕ 19.02.2020ರ ಬುಧವಾರ ಇಳಿಹೊತ್ತು 3.30 ಗಂಟೆಗೆ ಗೀತಾಂಬಿಕಾ ಸಭಾಗೃಹ, ಶ್ರೀ ಗೀತಾಂಬಿಕಾ ಮಂದಿರ, ಅಸಲ್ಫಾ ಇಲ್ಲಿ ನಡೆಯಲಿರುವ ದಶಮಾನೋತ್ಸವದ ನಿಮಿತ್ತ ಹಮ್ಮಿಕೊಂಡ ಶುಭವಸರದಲ್ಲಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು. ಇದೇ ಸಂದರ್ಭದಲ್ಲಿ ಶಾರದಾ ಚಂದ್ರಶೇಖರ್ ಮೂಲೆಮನೆ ಅವರಿಗೆ ವಾರ್ಷಿಕ ಕೊಡಮಾಡುವ `ಕೃಷಿಬಂಧು' ಪುರಸ್ಕಾರ ಪ್ರದಾನಿಸಲಾಗುವುದು.

ಪ್ರತಿಷ್ಠಾನದ ಅಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ ಕಡಂದಲೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಅತಿಥಿüಗಳಾಗಿ ಡಾ| ತೋನ್ಸೆ ವಿಜಯಕುಮಾರ್ ಶೆಟ್ಟಿ, ಶ್ರೀ ರಾಧಾಕೃಷ್ಣ ಭಟ್, ಡಾ| ರಜನಿ ವಿ.ಪೈ, ನವೀನ್ ಶೆಟ್ಟಿ ಇನ್ನಬಾಳಿಕೆ ಉಪಸ್ಥಿತಲಿರುವರು.

ಕಾರ್ಯಕ್ರಮದಲ್ಲಿ ಪ್ರತಿಷ್ಠಾನ ಹತ್ತು ವರ್ಷಗಳ ಸವಿನೆನಪಿಗೆ ಪ್ರಕಟಿಸುತ್ತಿರುವ `ದಶಧಾರೆ (ನನ್ನೂರು-ನನ್ನ ಶಹರ)' ಕೃತಿ ಲೋಕಾರ್ಪಣೆ ಗೊಳ್ಳಲಿದೆ. ಪ್ರದ್ಯುಮ್ನ ಮೂರ್ತಿ ಕಡಂದಲೆ ಇವರ ಅಧ್ಯಕ್ಷತೆಯಲ್ಲಿ `ಸಂಸ್ಕೃತ ಕಾವ್ಯ ಸೌರಭ' ಕವಿಗೋಷ್ಠಿ ಅಲ್ಲದೆ ಅಭಿನಯ ಮಂಟಪ ಮುಂಬಯಿ ಇವರಿಂದ `ಒಯಿಕ್‍ಲಾ ಕಾಸ್ ಬೋಡು' ಎಂಬ ತುಳು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಮಯೂರ ವರ್ಮ ಸಾಂಸ್ಕೃತಿಕ ಪ್ರತಿಷ್ಠಾನದ ಕಾರ್ಯದರ್ಶಿ ವಿಶ್ವನಾಥ ದೊಡ್ಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here