ಮಂಗಳೂರು ಹೊರವಲಯದ ಮುಲ್ಕಿಯ ಹಳೆಯಂಗಡಿ ಸಮೀಪದ ಪಾವಂಜೆ ಬಳಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಬೆಳ್ಳಿಯ ಆಭರಣ ದೋಚಿ ಪರಾರಿಯಾಗಿದ್ದಾರೆ. ಪಾವಂಜೆಯ ರಾಮ ಮೂರ್ತಿ ಭಟ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು ಈ ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಮನೆಯ ದೇವರ ಕೋಣೆಯಲ್ಲಿದ್ದ ಬೆಳ್ಳಿಯ ಆಭರಣ ಸೇರಿದಂತೆ ನಗದನ್ನು ಕಳ್ಳರು ಕದ್ದೊಯ್ದಿದಿದ್ದಾರೆ.
ಘಟನಾ ಸ್ಥಳಕ್ಕೆ ಮುಲ್ಕಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಲ್ಕಿ ಠಾಣೆಯಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ಖದೀಮರಿಗಾಗಿ ಬಲೆ ಬೀಸಿದ್ದಾರೆ.