ಮುಂಬಯಿ, ಎ.30: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಯುವ ಅಭ್ಯುದಯ ಉಪಸಮಿತಿ ಕಾರ್ಯಾಧ್ಯಕ್ಷ ನಾಗೇಶ್ ಎಂ.ಕೋಟ್ಯಾನ್ ಅವರ ಮಾತ್ರಶ್ರೀ ದೇವಕಿ ಎಂ.ಕೋಟ್ಯಾನ್ (79.) ಅವರು ಕಳೆದ ಶನಿವಾರ (ಎ.25) ಬಂಟ್ವಾಳ ಕುಂಜಾನಮಜಲ್ ಇಲ್ಲಿಟಿಚಿ ಸಮೃದ್ಧಿ ನಿವಾಸದ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಮೃತರು ನಾಲ್ಕು ಗಂಡು, ಮೂರು ಹೆಣ್ಣು ಹಾಗೂ ಅಪಾರ ಬಂಧು ಬಳಗ ಅಗಲಿದ್ದು, ನಿಧನಕ್ಕೆ ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ್ ಎಸ್.ಪೂಜಾರಿ ಮತ್ತು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.