Saturday 10th, May 2025
canara news

ಎಸ್ ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಈದ್ ಫುಡ್ ವಿತರಣೆ

Published On : 27 May 2020   |  Reported By : Rons Bantwal


ಮುಂಬಯಿ (ಮಂಗಳೂರು), ಮೇ.24: ಎಸ್ ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಉಳ್ಳಾಲ ಡಿವಿಷನ್ ಬ್ಲಡ್ ಸೈಬೋ ಟೀಮ್ ಸಹಕಾರದೊಂದಿಗೆ ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ರೋಗಿಗಳಿಗೆ ಈದ್ ಫುಡ್ ವಿತರಿಸಲಾಯಿತು.

ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬ್ಲಡ್ ಸೈಬೋ ಚೆಯರ್ಮ್ಯಾನ್ ತೌಸೀಫ್ ಸಅದಿ ಮುನ್ನುಡಿಯಾಗಿ ಮಾತನಾಡಿದರು.

ದ.ಕ ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಬ್ಲಡ್ ಸೈಬೋ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ 600 ಕ್ಕಿಂತಲೂ ಅಧಿಕ ಫುಡ್ ರೋಗಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ,ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ, ಸಯ್ಯಿದ್ ಖುಬೈಬ್ ತಂಙಳ್ ,ದ.ಕ ಜಿಲ್ಲಾ ಬ್ಲಡ್ ಸೈಬೋ ಉಸ್ತುವಾರಿ ಕೆರೀಂ ಕದ್ಕಾರ್, ಸದಸ್ಯರಾದ ನವಾಝ್ ಸಖಾಫಿ, ಹಕೀಂ ಕಳಂಜಿಬೈಲ್, ಸುಹೈಲ್ ಮಂಗಳೂರು, ಹಾಗೂ ದೇರಳಕಟ್ಟೆ ಸೆಕ್ಟರ್ ಕಾರ್ಯಕರ್ತರು ಉಪಸ್ಥಿತರಿದ್ದರು, ಉಳ್ಳಾಲ ಡಿವಿಷನ್ ಬ್ಲಡ್ ಸೈಬೋ ಕನ್ವೀನರ್ ಅಲ್ತಾಫ್ ಶಾಂತಿಬಾಗ್ ಸಹಕರಿಸಿದರು.ಜಿಲ್ಲಾ ಸದಸ್ಯರಾದ ಮುನೀರ್ ಸಖಾಫಿ ವಂದಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here