ಮುಂಬಯಿ-ಕಿರಿಮಂಜೇಶ್ವರ (ಆರ್ಬಿಐ), ಜು.08: ಭಾರತೀಯ ಪರಂಪರೆಯಲ್ಲಿ ಗುರುವಿಗೆ ವಿಶೇಷ ಸ್ಥಾನ ಮತ್ತು ಮಹತ್ವವಿದೆಯೆಂದು ಶುಭದಾ ಶಾಲೆಯ ಸಂಚಾಲಕರಾದ ಶಂಕರ ಪೂಜಾರಿ ಹೇಳಿದರು.
ಕುಂದಾಪುರ ನಾವುಂದ ಇಲ್ಲಿನ ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರು ಪೂರ್ಣಿಮೆಯ ಆಚರಿಸಿದ್ದು, ಶ್ರೀ ಗುರು ನಿತ್ಯಾನಂದ ಸ್ವಾಮಿ ಇವರ ಭಾವಚಿತ್ರಕ್ಕೆ ಪುಷ್ಪವೃಷ್ಠಿಗೈದು ನಮನ ಸಲ್ಲಿಸಿ ಶಂಕರ ಪೂಜಾರಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಲಹಾ ಸಮಿತಿ ಸದಸ್ಯ ಆರ್.ಕೆ ಬಿಲ್ಲವ, ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.