ಉಜಿರೆ: ವಿದ್ಯಾಕ್ಷೇತ್ರಕ್ಕೆ ಧರ್ಮಸ್ಥಳದಿಂದ ಸತತವಾಗಿ ಸಹಕಾರ ಮತ್ತು ಪೆÇ್ರೀತ್ಸಾಹ ನೀಡುತ್ತಾ ಬರಲಾಗಿದೆ. ವಿದ್ಯಾಸಂಸ್ಥೆಗಳಿಗೆ ಕೊಡುವ ಸಹಕಾರದಲ್ಲಿ ವಿಶೇಷವಾಗಿ ಬೆಂಚು-ಡೆಸ್ಕ್ಗಳನ್ನು ಸಿಮೆಂಟ್ನಿಂದಲೇ ತಯಾರಿಸಿ ಕೊಡಲಾಗುತ್ತಿದೆ.
ಮರದ ಬಳಕೆ ಇಲ್ಲದೆ ಸಿಮೆಂಟ್ ಮತ್ತು ತೆಂಗಿನ ಮರದ ಕಾಂಡದಿಂದ ತಯಾರಿಸಲಾದ ಪರಿಸರ ಸ್ನೇಹಿ ಬೆಂಚು-ಡೆಸ್ಕ್ಗಳನ್ನು 1990 ನೇ ಇಸವಿಯಿಂದ ಇದುವರೆಗೆ ಕರ್ನಾಟಕ ರಾಜ್ಯದ 9645 ಸರ್ಕಾರಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಫಾರಸಿನೊಂದಿಗೆ ರೂ. 17 ಕೋಟಿ ಮೌಲ್ಯದ ಬೆಂಚು-ಡೆಸ್ಕ್ಗಳನ್ನು ನೀಡಲಾಗಿದೆ.
ಈ ವರ್ಷದ ಬಜೆಟ್ನಲ್ಲಿ ಇದಕ್ಕಾಗಿ ರೂ. ಒಂದು ಕೋಟಿ ನಿಗದಿಪಡಿಸಲಾಗಿದೆ.
ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಅಧ್ಯಾಪಕರಿಗೆ ಡಿ. ವೀರೇಂದ್ರ ಹೆಗ್ಗಡೆಯವರು ಅಭಿನಂದನೆಗಳನ್ನು ತಿಳಿಸುತ್ತಾ, ಕೊರೊನಾ ಮುಕ್ತ ಮುಂದಿನ ದಿನಗಳಲ್ಲಿ ಹೆಚ್ಚಿನ ಶ್ರದ್ಧೆಯಿಂದ ವಿದ್ಯಾದಾನ ಮಾಡುವಂತೆ ಸಂದೇಶವನ್ನು ನೀಡಿ ಎಲ್ಲರಿಗೂ ಶುಭ ಹಾರೈಸಿದ್ದಾರೆ.