Thursday 28th, March 2024
canara news

ಶುಭದಾ ಶಾಲೆಯಲ್ಲಿ ನಾರಾಯಣಗುರು ಜಯಂತಿ

Published On : 06 Sep 2020   |  Reported By : Rons Bantwal


ಕಿರಿಮಂಜೇಶ್ವರ:- ಶುಭದಾ ಆಂಗ್ಲಮಾಧ್ಯಮ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 160ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಶ್ರೀಗುರು ನಿತ್ಯಾನಂದ ಸೌಹಾರ್ದ ಸಹಕಾರಿಯ ಸಲಹೆಗಾರರಾದ ಕೆ.ಪುಂಡಲೀಕ ನಾಯಕರವರು ದೀಪ ಬೆಳಗಿಸಿ ಪುಷ್ಪನಮನ ಸಲ್ಲಿಸಿ ಶ್ರೀ ನಾರಾಯಣ ಗುರುಗಳು ಧರ್ಮಗಳ ವಿಚಾರದಲ್ಲಿ ಆಧ್ಯಾತ್ಮಿಕ ಜಗತ್ತಿನ ಓರ್ವ ಪ್ರಜ್ಞಾವಂತ ಚಿಂತಕರಾಗಿದ್ದರು, ಸ್ಪಷ್ಟಮಾತುಗಳ ಕ್ರೀಯಾಶೀಲ ಸಮಾಜ ಸುಧಾರಕರಾಗಿದ್ದರು.

ಅವರ ಚಿಂತನೆಗಳು ಇಡೀ ಮಾನವ ಜನಾಂಗಕ್ಕೆ ಸಾರ್ವಕಾಲಿಕ ಸತ್ಯವನ್ನು ಬೋಧಿಸುವ ಕೈದಿವಿಗೆಗಳಾಗಿದ್ದರಿಂದಲೇ ನಾರಾಯಣ ಗುರುಗಳು ವಿಶ್ವಮಾನವರಾಗಿರುತ್ತಾರೆ ಎಂದು ಹೇಳಿದರು. ಸಂಚಾಲಕರಾದ ಶಂಕರ ಎಸ್ ಪೂಜಾರಿ, ಮುಖ್ಯಶಿಕ್ಷಕರಾದ ರವಿದಾಸ ಶೆಟ್ಟಿ, ಶಾಲಾ ಸಮಿತಿಯ ಸದಸ್ಯರಾದ ರಾಮಕೃಷ್ಣ ಬಿಲ್ಲವ, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here