ನದಿಯಲ್ಲಿ ಈಜಲು ಹೋದ ಮೂವರಲ್ಲಿ ಒರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಳಕುಂಜೆ ಸಮೀಪದ ಕರ್ನಿರೆ ಎಂಬಲ್ಲಿ ಇಂದು ನಡೆದಿದೆ.ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಅನಿಲ್ ಕುಮಾರ್ (32)ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಬಂದಿದ್ದ ತಂಡದಲ್ಲಿ ಮೂವರು ಶಾಂಭವಿ ನದಿಗೆ ಈಜಲು ಇಳಿದಿದ್ದು, ಈ ವೇಳೆ ಅನಿಲ್ ಅವರು ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ತಂಡದಲ್ಲಿದ್ದ ಇಬ್ಬರನ್ನು ಸ್ಥಳಿಯರು ರಕ್ಷಿಸಿದ್ದಾರೆ.ಘಟನಾ ಸ್ಥಳಕ್ಕೆ ಮೂಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.