Saturday 12th, July 2025
canara news

ಸುರೇಶ್ ಆಚಾರ್ಯ ಪಿಲಾರು ನಿಧನ

Published On : 26 Sep 2020   |  Reported By : Rons Bantwal


ಮುಂಬಯಿ, ಸೆ.25: ಬೃಹನ್ಮುಂಬಯಿಯ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆಗೈದು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಸಂಘದ 2012-2015ನೇ ಸಾಲಿನಲ್ಲಿ ಜೊತೆ ಕೋಶಾಧಿಕಾರಿ ಆಗಿದ್ದ ಸುರೇಶ್ ಆಚಾರ್ಯ (49.) ಇಂದಿಲ್ಲಿ ತೀವ್ರ ಹೃದಯಾಘಾತದಿಂದ ನೆರೂಲ್ ಪಶ್ಚಿಮದಲ್ಲಿನ ಮಾನಕ್ ಆಸ್ಪತ್ರೆಯಲ್ಲಿ ವಿಧಿವಶರಾದರು.

ಉದಯವಾಣಿ ಕನ್ನಡ ದೈನಿಕದ ಮುಂಬಯಿ ಆವೃತ್ತಿಯಲ್ಲಿ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿ ಸದ್ಯ ವಕೀಲ ವೃತ್ತಿಯಲ್ಲಿ ತೊಡಗಿಸಿದ್ದ ಇವರು ಉಡುಪಿ ಜಿಲ್ಲೆಯ ಕಾರ್ಕಳ ಪಿಲಾರು ಮೂಲದವರಾಗಿದ್ದು ಪ್ರಸ್ತುತ ನವಿ ಮುಂಬಯಿ ನೆರೂಲ್ ಸೆಕ್ಟರ್ 10ರ ಗಾಂವ್‍ದೇವಿ ಇಲ್ಲಿನ ಪ್ರಸಾದ್ ಬಿಲ್ಡಿಂಗ್‍ನಲ್ಲಿ ವಾಸವಾಗಿದ್ದರು.

ಮೃತರು ಪತ್ನಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಸುರೇಶ್ ಆಚಾರ್ಯ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿ ಬಾಷ್ಪಾಂಜಲಿ ಕೋರಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here