Friday 19th, April 2024
canara news

ಸುರೇಶ್ ಆಚಾರ್ಯ ಪಿಲಾರು ನಿಧನ

Published On : 26 Sep 2020   |  Reported By : Rons Bantwal


ಮುಂಬಯಿ, ಸೆ.25: ಬೃಹನ್ಮುಂಬಯಿಯ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆಗೈದು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಸಂಘದ 2012-2015ನೇ ಸಾಲಿನಲ್ಲಿ ಜೊತೆ ಕೋಶಾಧಿಕಾರಿ ಆಗಿದ್ದ ಸುರೇಶ್ ಆಚಾರ್ಯ (49.) ಇಂದಿಲ್ಲಿ ತೀವ್ರ ಹೃದಯಾಘಾತದಿಂದ ನೆರೂಲ್ ಪಶ್ಚಿಮದಲ್ಲಿನ ಮಾನಕ್ ಆಸ್ಪತ್ರೆಯಲ್ಲಿ ವಿಧಿವಶರಾದರು.

ಉದಯವಾಣಿ ಕನ್ನಡ ದೈನಿಕದ ಮುಂಬಯಿ ಆವೃತ್ತಿಯಲ್ಲಿ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿ ಸದ್ಯ ವಕೀಲ ವೃತ್ತಿಯಲ್ಲಿ ತೊಡಗಿಸಿದ್ದ ಇವರು ಉಡುಪಿ ಜಿಲ್ಲೆಯ ಕಾರ್ಕಳ ಪಿಲಾರು ಮೂಲದವರಾಗಿದ್ದು ಪ್ರಸ್ತುತ ನವಿ ಮುಂಬಯಿ ನೆರೂಲ್ ಸೆಕ್ಟರ್ 10ರ ಗಾಂವ್‍ದೇವಿ ಇಲ್ಲಿನ ಪ್ರಸಾದ್ ಬಿಲ್ಡಿಂಗ್‍ನಲ್ಲಿ ವಾಸವಾಗಿದ್ದರು.

ಮೃತರು ಪತ್ನಿ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ. ಸುರೇಶ್ ಆಚಾರ್ಯ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿ ಬಾಷ್ಪಾಂಜಲಿ ಕೋರಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here