ಮುಂಬಯಿ (ಆರ್ಬಿಐ), ನ.23: ಕಾಸರಗೋಡು ಜಿಲ್ಲೆಯ ಉಪ್ಪಳ ಇಲ್ಲಿನ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಮ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ಘಟಕಕ್ಕೆ ಅತ್ಯವಶ್ಯಕ ಬೆಡ್ಶೀಟ್, ತಲೆದಿಂಬು ಕವಚಗಳನ್ನು ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಟ್ರಸ್ಟ್ನ ವಿಶ್ವಸ್ಥರಲ್ಲೊರ್ವರಾದ ಶಶಿಧರ ಶೆಟ್ಟಿ ಗ್ರಾಮಚಾವಡಿ ಅವರ ಮೂಲಕ ಭಾನುವಾರ ಆಶ್ರಮದ ಗಾಯತ್ರೀ ಮಂಟಪದಲ್ಲಿ ಆಶ್ರಮದ ಕಾರ್ಯಕರ್ತರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಂಜೇಶ್ವರ ಪಂಚಾಯತ್ ಅಧ್ಯಕ್ಷ ಎ.ಕೆ.ಎಂ.ಅಶ್ರಫ್, ಮಂಗಲ್ಪಾಡಿ ಗ್ರಾ.ಪಂ.ಸದಸ್ಯ ಮುಸ್ತಫಾ ಮೊದಲಾದವರು ಉಪಸ್ಥಿತರಿದ್ದರು