Thursday 25th, April 2024
canara news

ಕೋವಿಡ್ ಲಸಿಕೆ ಹಾಕಿಸಿಕೊಂಡ ಶ್ರೀ ಜೈನ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯರು

Published On : 20 Mar 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಮಾ.19: ಶ್ರೀ ಜೈನ ಮಠ ಜೈನಕಾಶಿ ಮೂಡುಬಿದಿರೆ ಇದರ ಶ್ರೀ ಜೈನ ಮಠದ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ವರ್ಯ ಮಹಾ ಸ್ವಾಮೀಜಿ ಅವರು ಇಂದಿಲ್ಲಿ ಶುಕ್ರವಾರ ಕೋವಿಡ್ ಲಸಿಕೆ ಹಾಕಿಸಿ ಕೊಂಡರು.

ಆರೋಗ್ಯಸೇತು ಆಪ್‍ನಲ್ಲಿ ಆಧಾರ್ ಕಾರ್ಡ್ ಮುಖೆನ ಹೆಸರು ನೋಂದಾಯಿಸಿ ಕೊಂಡು ಇಂದು ಅಪರಾಹ್ನ ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿ ಕೊಂಡು 15 ನಿಮಿಷ ಲಸಿಕೆ ಹಾಕಿದ ನಂತರ ಎಂದಿನಂತೆ ತಮ್ಮ ನಗುಮೊಗದ ಲವಲವಿಕೆಯಿಂದಲೇ ಶ್ರೀ ಜೈನ ಮಠಕ್ಕೆ ಹಿಂತಿರುಗಿದರು.

ಮುಖ್ಯ ವೈದ್ಯಾಧಿಕಾರಿ ಕೆ.ಶಕುಂತಲಾ, ನಾಗರಾಜ್ ಭಟ್ ಮರಕಡ, ಅಭಯ ಕುಮಾರ್ ಉಪಸ್ಥಿತರಿದ್ದರು ಶ್ರೀಗಳು ಆಗಾಗ್ಗ ಅಂತರ್‍ರಾಜ್ಯ ಪ್ರಯಾಣ ಮಾಡುತ್ತಿರುವುದರಿಂದ ತಮ್ಮ ಆರೋಗ್ಯ ಮತ್ತು ಸಮಾಜ ಸ್ವಸ್ಥ್ಯತೆಗಾಗಿ ಕೊವಿಡ್ ಲಸಿಕೆ ಹಾಕಿಸಿ ಕೊಂಡಿರುವುದಾಗಿ ಶ್ರೀ ಜೈನ ಮಠ ಮೂಡುಬಿದಿರೆ ಇದರ ವ್ಯವಸ್ಥಾಪಕ ಸಂಜಯಂಥ ಕುಮಾರ್ ಶೆಟ್ಟಿ ತಿಳಿಸಿದರು




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here